1:38 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಹೆಬ್ರಿ ಹೋಬಳಿ ರಚನೆಗೆ ಸಚಿವ ಸಂಪುಟ ಅನುಮೋದನೆ: ಸಚಿವ ವಿ. ಸುನಿಲ್ ಕುಮಾರ್

05/10/2021, 19:08

ಕಾರ್ಕಳ(reporterkarnataka.com) : ಹೆಬ್ರಿ ತಾಲೂಕು ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಪೂರ್ಣ ಪ್ರಮಾಣದ ತಾಲೂಕಾಗಿ ಘೋಷಣೆ ಆಗಿ ವರ್ಷಗಳಾದರೂ ಇಷ್ಟರವರೆಗೆ ಹೋಬಳಿ ಘೋಷಣೆ ಆಗದೇ ಇರುವುದರಿಂದ ಹಲವಾರು ಆಡಳಿತಾತ್ಮಕ ಸಮಸ್ಯೆಗಳು ತಲೆದೋರುತ್ತಿದ್ದು ಈ ನಿಟ್ಟಿನಲ್ಲ ಸಚಿವ ಸುನಿಲ್ ಕುಮಾರ್ ಹೆಬ್ರಿ ಹೋಬಳಿ ರಚನೆ ಮಾಡುವ ಬಗ್ಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಆಗಿರುತ್ತದೆ. 

ಹೆಬ್ರಿ ತಾಲೂಕು ರಚನೆಗೊಂಡು ತಾಲೂಕು ಕಚೇರಿ ಆರಂಭ ಆಗಿದ್ದರೂ ತಾಲೂಕಿನ ಹೆಚ್ಚಿನ ಗ್ರಾಮಗಳು ಅಜೆಕಾರು ಹೋಬಳಿಗೆ ಒಳಗೊಂಡಿತ್ತು. ಹಾಗೂ ಹೆಬ್ರಿ ತಾಲೂಕಿನ ಸಾರ್ವಜನಿಕರು ಕಂದಾಯ ಇಲಾಖೆಯ ಸೇವೆ ಪಡೆಯಲು ಅಜೆಕಾರು ನಾಡ ಕಚೇರಿಗೆ ಬಂದು ಅರ್ಜಿ ಸಲ್ಲಿಸಬೇಕಾಗಿತ್ತು.  ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿತ್ತು ಮತ್ತು ಎರಡೂ ಕಡೆ ಒಬ್ಬರೇ ಕಂದಾಯ ನಿರೀಕ್ಷಕರು ಕರ್ತವ್ಯ ನಿರ್ವಹಿಸಬೇಕಾಗಿತ್ತು. 

ಈ ಎಲ್ಲ ಸಮಸ್ಯೆಗಳನ್ನು ಮನಗಂಡು ಮಾನ್ಯ ಸಚಿವ ವಿ. ಸುನಿಲ್ ಕುಮಾರ್  ಅವರು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ ಮಾಡಿಕೊಂಡ ಮೇರೆಗೆ ಇಂದು ನಡೆದ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಕಡತ ಹಾಜರುಪಡಿಸಿದ್ದರು.

ಹೋಬಳಿ ರಚನೆ ಬಗ್ಗೆ ಶೀಘ್ರ ಸರ್ಕಾರಿ ಆದೇಶ ಜಾರಿ ಆಗಲಿದ್ದು ತದನಂತರ ಹೆಬ್ರಿ ತಾಲೂಕು ಕೇಂದ್ರದಲ್ಲಿಯೇ ಕಂದಾಯ ಸೇವೆಗಳು ಆರಂಭವಾಗಲಿದ್ದು, ಹೆಬ್ರಿ ಕೇಂದ್ರ ಸ್ಥಾನಕ್ಕೆ ಓರ್ವ ಕಂದಾಯ ನಿರೀಕ್ಷಕರು ಹಾಗೂ ಇನ್ನಿತರ ಹುದ್ದೆಗಳು ಸೃಷ್ಠಿಯಾಗಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರಿಗೆ ತ್ವರಿತವಾಗಿ ಮತ್ತು ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಸಚಿವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು