6:30 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಹೆಬ್ರಿ: ಜಾಗದ ತಕರಾರು; ಇತ್ತಂಡಗಳ ಮಧ್ಯೆ ಗಲಾಟೆ: ಎರಡು ಪ್ರತ್ಯೇಕ ಪ್ರಕರಣಗಳು ದಾಖಲು

06/11/2022, 21:55

ಕಾರ್ಕಳ(reporterkarnataka.com): ಇತ್ತಂಡಗಳ ನಡುವೆ ನಡೆದ ಗಲಾಟೆಯಲ್ಲಿ ಹೆಬ್ರಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.

ಗಲಾಟೆಗೆ ಸಂಬಂಧಿಸಿದಂತೆ ಸುಕುಮಾರ ಶೆಟ್ಟಿ ಎಂಬವರು ನೀಡಿದ ದೂರಿನಲ್ಲಿ, ಗದಗ ಜಿಲ್ಲೆಯಲ್ಲಿ ಇರುವ ಇವರು ಹೆಬ್ರಿಯ ಬೇಳಂಜೆ ಗ್ರಾಮದಲ್ಲಿ ಕುಟುಂಬದ ಜಾಗ ಹೊಂದಿದ್ದಾರೆ. ಈ ಜಾಗಕ್ಕೆ ಸಂಬಂಧಿಸಿ ವಿಭಾಗ ಪತ್ರವು ಅಗಿರುತ್ತದೆ. ಸುಕುಮಾರ ಶೆಟ್ಟಿ ಅಗಾಗ ಬೇಳಂಜೆಗೆ ಬಂದು ಹೋಗುತ್ತಿದ್ದು, ಅದರಂತೆ ನ.4 ರಂದು ಸುಕುಮಾರ ಶೆಟ್ಟಿ ರವರು ತನ್ನ ತಾಯಿಯೊಂದಿಗೆ ಬೇಳಂಜೆಗೆ ಬಂದು ತಮ್ಮ ಜಾಗದಲ್ಲಿ ಜೆಸಿಬಿಯಿಂದ ಕೆಲಸ ಮಾಡಿಸುತ್ತಿರುವಾಗ ಸುಕುಮಾರ ಶೆಟ್ಟಿ ರವರ ಚಿಕ್ಕಮ್ಮಅರುಣ ಬಿ.ಶೆಟ್ಟಿ ಅಲ್ಲಿಗೆ ಬಂದು ಜೆಸಿಬಿಯ ಮುಂದೆ ಅಡ್ಡ ಮಲಗಿದ್ದರು. ಈ ವೇಳೆ ಅವರನ್ನು ಸುಕುಮಾರ ಶೆಟ್ಟಿ ರವರು ತಡೆಯಲು ಹೋದಾಗ
ಅರುಣ ಬಿ ಶೆಟ್ಟಿ ಅವರು ಏಕಾಏಕಿ ಇವರ ಮೇಲೆ ಚೂರಿಯಿಂದ ಹಲ್ಲೆ ಮಾಡಿ ಅವಾಚ್ಯ ಶಬ್ದದಿಂದ ಬೈದು ಜೀವ ಬೆದರಿಕೆ ಹಾಕಿ ಓಡಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ವಿಚಾರವಾಗಿ ಅರುಣ.ಬಿ.ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದು, ಬೇಳಂಜೆ ಗ್ರಾಮದ ನಡುಗುಡ್ಡೆ ಇವರು ತನ್ನ ಗಂಡನೊಂದಿಗೆ ವಾಸವಾಗಿದ್ದಾರೆ. ಅವರಿಗೆ ತಾಯಿಯ ಹೆಸರಿನಲ್ಲಿದ್ದ ಜಾಗದ ಪಾಲಿನ ವಿಚಾರದಲ್ಲಿ ತಕರಾರು ಇದ್ದು, ನ.4 ರಂದು ಮದ್ಯಾಹ್ನ 12:00 ಗಂಟೆಗೆ ತಮ್ಮ ಅಕ್ಕ ಗುಲಾಬಿ ಮತ್ತು ಅವರ ಮಗ ಸುಕುಮಾರ ಇವರು ಜೆ.ಸಿ.ಬಿ ಯಲ್ಲಿ ಅರುಣ.ಬಿ.ಶೇಡ್ತಿ ರವರ ತಾಯಿಯವರಿಗೆ ಸೇರಿದ ಜಾಗದಲ್ಲಿ ಕೆಲಸ ಮಾಡಿಸುವಾಗ ಅಲ್ಲಿಗೆ ಹೋಗಿ ಈ ಜಾಗವು ತಾಯಿಯ ಹೆಸರಿನಲ್ಲಿದೆ. ಇಲ್ಲಿ ಕೆಲಸ ಮಾಡಬೇಡಿ ಎಂದು ಹೇಳಿ ತಡೆಯಲು ಹೋದಾಗ ಆರೋಪಿತರು ಅವಾಚ್ಯಶಬ್ದದಿಂದ ಬೈದು ಹೊಡೆದು ಹಲ್ಲೆ ಮಾಡಿ ಅಲ್ಲಿಯೇ ಇದ್ದ ಅವರಣ ಇರದ ಬಾವಿಗೆ ದೂಡಿ ಕೊಲೆ ಮಾಡಲು ಪ್ರಯತ್ನಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು