6:39 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಹೆಬ್ರಿ: ಜಾಗದ ತಕರಾರು; ಇತ್ತಂಡಗಳ ಮಧ್ಯೆ ಗಲಾಟೆ: ಎರಡು ಪ್ರತ್ಯೇಕ ಪ್ರಕರಣಗಳು ದಾಖಲು

06/11/2022, 21:55

ಕಾರ್ಕಳ(reporterkarnataka.com): ಇತ್ತಂಡಗಳ ನಡುವೆ ನಡೆದ ಗಲಾಟೆಯಲ್ಲಿ ಹೆಬ್ರಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.

ಗಲಾಟೆಗೆ ಸಂಬಂಧಿಸಿದಂತೆ ಸುಕುಮಾರ ಶೆಟ್ಟಿ ಎಂಬವರು ನೀಡಿದ ದೂರಿನಲ್ಲಿ, ಗದಗ ಜಿಲ್ಲೆಯಲ್ಲಿ ಇರುವ ಇವರು ಹೆಬ್ರಿಯ ಬೇಳಂಜೆ ಗ್ರಾಮದಲ್ಲಿ ಕುಟುಂಬದ ಜಾಗ ಹೊಂದಿದ್ದಾರೆ. ಈ ಜಾಗಕ್ಕೆ ಸಂಬಂಧಿಸಿ ವಿಭಾಗ ಪತ್ರವು ಅಗಿರುತ್ತದೆ. ಸುಕುಮಾರ ಶೆಟ್ಟಿ ಅಗಾಗ ಬೇಳಂಜೆಗೆ ಬಂದು ಹೋಗುತ್ತಿದ್ದು, ಅದರಂತೆ ನ.4 ರಂದು ಸುಕುಮಾರ ಶೆಟ್ಟಿ ರವರು ತನ್ನ ತಾಯಿಯೊಂದಿಗೆ ಬೇಳಂಜೆಗೆ ಬಂದು ತಮ್ಮ ಜಾಗದಲ್ಲಿ ಜೆಸಿಬಿಯಿಂದ ಕೆಲಸ ಮಾಡಿಸುತ್ತಿರುವಾಗ ಸುಕುಮಾರ ಶೆಟ್ಟಿ ರವರ ಚಿಕ್ಕಮ್ಮಅರುಣ ಬಿ.ಶೆಟ್ಟಿ ಅಲ್ಲಿಗೆ ಬಂದು ಜೆಸಿಬಿಯ ಮುಂದೆ ಅಡ್ಡ ಮಲಗಿದ್ದರು. ಈ ವೇಳೆ ಅವರನ್ನು ಸುಕುಮಾರ ಶೆಟ್ಟಿ ರವರು ತಡೆಯಲು ಹೋದಾಗ
ಅರುಣ ಬಿ ಶೆಟ್ಟಿ ಅವರು ಏಕಾಏಕಿ ಇವರ ಮೇಲೆ ಚೂರಿಯಿಂದ ಹಲ್ಲೆ ಮಾಡಿ ಅವಾಚ್ಯ ಶಬ್ದದಿಂದ ಬೈದು ಜೀವ ಬೆದರಿಕೆ ಹಾಕಿ ಓಡಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ವಿಚಾರವಾಗಿ ಅರುಣ.ಬಿ.ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದು, ಬೇಳಂಜೆ ಗ್ರಾಮದ ನಡುಗುಡ್ಡೆ ಇವರು ತನ್ನ ಗಂಡನೊಂದಿಗೆ ವಾಸವಾಗಿದ್ದಾರೆ. ಅವರಿಗೆ ತಾಯಿಯ ಹೆಸರಿನಲ್ಲಿದ್ದ ಜಾಗದ ಪಾಲಿನ ವಿಚಾರದಲ್ಲಿ ತಕರಾರು ಇದ್ದು, ನ.4 ರಂದು ಮದ್ಯಾಹ್ನ 12:00 ಗಂಟೆಗೆ ತಮ್ಮ ಅಕ್ಕ ಗುಲಾಬಿ ಮತ್ತು ಅವರ ಮಗ ಸುಕುಮಾರ ಇವರು ಜೆ.ಸಿ.ಬಿ ಯಲ್ಲಿ ಅರುಣ.ಬಿ.ಶೇಡ್ತಿ ರವರ ತಾಯಿಯವರಿಗೆ ಸೇರಿದ ಜಾಗದಲ್ಲಿ ಕೆಲಸ ಮಾಡಿಸುವಾಗ ಅಲ್ಲಿಗೆ ಹೋಗಿ ಈ ಜಾಗವು ತಾಯಿಯ ಹೆಸರಿನಲ್ಲಿದೆ. ಇಲ್ಲಿ ಕೆಲಸ ಮಾಡಬೇಡಿ ಎಂದು ಹೇಳಿ ತಡೆಯಲು ಹೋದಾಗ ಆರೋಪಿತರು ಅವಾಚ್ಯಶಬ್ದದಿಂದ ಬೈದು ಹೊಡೆದು ಹಲ್ಲೆ ಮಾಡಿ ಅಲ್ಲಿಯೇ ಇದ್ದ ಅವರಣ ಇರದ ಬಾವಿಗೆ ದೂಡಿ ಕೊಲೆ ಮಾಡಲು ಪ್ರಯತ್ನಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು