7:41 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಹೆಬ್ರಿ: ಎತ್ತಿ ಆಟವಾಡಿಸುತ್ತಿದ್ದ ವೇಳೆ ಕೆಳಗೆ ಬಿದ್ದು ಮಗುವಿಗೆ ಗಂಭೀರ ಗಾಯ; ಪ್ರಕರಣ ದಾಖಲು

20/05/2022, 18:58

ಹೆಬ್ರಿ (reporterkarnataka.com): ಮಗುವನ್ನು ಎತ್ತಿ ಆಡಿಸುವ ವೇಳೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಪುರ ಗ್ರಾಮದ ಮುಳ್ಳು ಗುಡ್ಡೆಯಲ್ಲಿ ನಡೆದಿದೆ. ಜನತಾ ಕಾಲೋನಿಯ  ಕೃಷ್ಣ ಶಕುಂತಲ ದಂಪತಿಯ ಎರಡೂವರೆ ವರ್ಷದ ಸಾಕ್ಷಿ ಗಂಭೀರ ಗಾಯಗೊಂಡಿದೆ.

ಮಂಗಳವಾರ ರಾತ್ರಿ  ಮನೆಯ ಸಮೀಪದಲ್ಲಿರುವ  ಗುಡ್ಡದ ದೈವದ ತಂಬಿಲ ಇದ್ದ ಕಾರಣ ಮನೆಯಲ್ಲಿ ಊಟಕ್ಕೆ ಸಂಬಂಧಿಕ ರಾಜು ಎಂಬವರ ಬಂದಿದ್ದು ಈ ವೇಳೆ ಮನೆಯ ಚಾವಡಿಯಲ್ಲಿ ಸಾಕ್ಷಿ ಆಟವಾಡುತ್ತಿರುವಾಗ ಮಗುವನ್ನು ಎರಡು ಕೈಯಿಂದ ಎತ್ತಿ ಆಡಿಸಿದ್ದಾರೆ. ಈ ವೇಳೆ ರಾಜು ಕೈಯಿಂದ ಮಗು ಕೈಯಿಂದ ನೆಲಕ್ಕೆ ಜಾರಿ ಬಿದ್ದ ಪರಿಣಾಮವಾಗಿ ಮಗುವಿನ ಎಡ ಕಿವಿಯ ಬಳಿ ತೀವ್ರಸ್ವರೂಪದ ಗಾಯಗಳಾಗಿವೆ. ರಾಜು ನಿರ್ಲಕ್ಷದಲ್ಲಿ ಘಟನೆ ನಡೆದಿದೆ ಎಂದು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು