10:22 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಹೆಚ್ಚುತ್ತಿದೆ ಕೊರೊನಾ ಪಾಸಿಟಿವ್ ರೇಟ್ : ಮತ್ತೆ ಲಾಕ್ ಡೌನ್ ನತ್ತ ಮುಖ ಮಾಡಿದ ಸಿಲಿಕಾನ್ ಸಿಟಿ, ಕಡಲ ನಗರಿ !

02/08/2021, 21:24

ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮತ್ತೊಮ್ಮೆ ಲಾಕ್ ಡೌನ್ ನತ್ತ ಮುಖ ಮಾಡಿದೆ. ಇದರೊಂದಿಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿಯೂ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.

ಬೆಂಗಳೂರಿನ ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಮಹದೇವಪುರದಲ್ಲಿ ಕೊರೊನಾ ಪ್ರಕರಣಗಳು 

ವಿಪರೀತ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸೀಲ್ಡೌನ್ ಗೆ ಮುಂದಾಗಿದೆ. ಹೆಚ್ಚು ಪ್ರಕರಣ ಪತ್ತೆ ಆಗಿರುವ ಮನೆಗಳಿಗೆ ಸೀಲ್ ಡೌನ್ ಮಾಡಲಾಗುತ್ತಿದೆ. ಇನ್ನು ಹೈರಿಸ್ಕ್ ರಾಜ್ಯದಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯವಾಗಿದೆ. 

ಅದು ಕೂಡ ಬಿಬಿಎಂಪಿ ಸೂಚಿಸಿದ ಸ್ಥಳದಲ್ಲಿಯೇ ಕ್ವಾರಂಟೈನ್ ಆಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. 

ಕ್ವಾರಂಟೈನ್ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡಲಾಗುವುದು. ಟೆಸ್ಟ್‌ನಲ್ಲಿ ನೆಗೆಟಿವ್ ವರದಿ ಬಂದರಷ್ಟೇ ಮನೆಗೆ ವಾಪಸ್ ಕಳಿಸಲಾಗುತ್ತೆ. ಕೇರಳದಿಂದ ಬರುವವರು ಕೋವಿಡ್ ನೆಗೆಟಿವ್ ವರದಿ ತರಬೇಕು ಎಂದರು.

ಬಿಬಿಎಂಪಿ ಈಗಾಗಲೇ ನಿರ್ಮಾಣ ಮಾಡಿರುವ ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಬಿಬಿಎಂಪಿ ಎಂಟು ವಲಯದಲ್ಲೂ ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಿದೆ. ಹೈ ರಿಸ್ಕ್ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಅಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ. ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಆದರೆ ಹಣ ಪಾವತಿಸಬೇಕು. ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಣ ಪಾವತಿಸಬೇಕಾಗಿಲ್ಲ.

ವೀಕೆಂಡ್ ಲಾಕ್‌ಡೌನ್ ಬಗ್ಗೆ ಬಿಬಿಎಂಪಿ ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸಾಮಾನ್ಯ ಜನರು ಜೀವನ ನಡೆಸಬೇಕಾಗಿದೆ. ಕೊರೊನಾ ಸೋಂಕಿಗೆ ಪೂರ್ವ ಸಿದ್ಧತೆ ಆಗಬೇಕಾಗಿದೆ. ಸರ್ಕಾರದ ಹಂತದಲ್ಲಿ ಅಂತಿಮ‌ ತೀರ್ಮಾನ ಆಗಲಿದೆ. ಕೊರೊನಾ ಕೇಸ್‌ಗಳು 500ಕ್ಕಿಂತ ಕಡಿಮೆ ಬರುತ್ತಿದೆ. ಕಂಟೇನ್‌ಮೆಂಟ್ ವಿಚಾರದಲ್ಲಿ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಈಗಾಗಲೇ ನಿರ್ಮಾಣ ಮಾಡಿರುವ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಬಿಬಿಎಂಪಿ ಎಂಟು ವಲಯದಲ್ಲೂ ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಿದೆ. ಹೈ ರಿಸ್ಕ್ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಅಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಆದರೆ ಹಣ ಪಾವತಿಸಬೇಕು. ಕೊವಿಡ್ ಕೇರ್ ಸೆಂಟರ್‌ನಲ್ಲಿ ಹಣ ಪಾವತಿಸಬೇಕಾಗಿಲ್ಲ.

ವೀಕೆಂಡ್ ಲಾಕ್‌ಡೌನ್ ಬಗ್ಗೆ ಬಿಬಿಎಂಪಿ ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸಾಮಾನ್ಯ ಜನರು ಜೀವನ ನಡೆಸಬೇಕಾಗಿದೆ. ಕೊರೊನಾ ಸೋಂಕಿಗೆ ಪೂರ್ವ ಸಿದ್ಧತೆ ಆಗಬೇಕಾಗಿದೆ. ಸರ್ಕಾರದ ಹಂತದಲ್ಲಿ ಅಂತಿಮ‌ ತೀರ್ಮಾನ ಆಗಲಿದೆ. ಕೊರೊನಾ ಕೇಸ್‌ಗಳು 500ಕ್ಕಿಂತ ಕಡಿಮೆ ಬರುತ್ತಿದೆ. ಕಂಟೇನ್‌ಮೆಂಟ್ ವಿಚಾರದಲ್ಲಿ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು