11:26 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಹೆಚ್ಚುತ್ತಿದೆ ಕೊರೊನಾ ಪಾಸಿಟಿವ್ ರೇಟ್ : ಮತ್ತೆ ಲಾಕ್ ಡೌನ್ ನತ್ತ ಮುಖ ಮಾಡಿದ ಸಿಲಿಕಾನ್ ಸಿಟಿ, ಕಡಲ ನಗರಿ !

02/08/2021, 21:24

ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮತ್ತೊಮ್ಮೆ ಲಾಕ್ ಡೌನ್ ನತ್ತ ಮುಖ ಮಾಡಿದೆ. ಇದರೊಂದಿಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿಯೂ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.

ಬೆಂಗಳೂರಿನ ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಮಹದೇವಪುರದಲ್ಲಿ ಕೊರೊನಾ ಪ್ರಕರಣಗಳು 

ವಿಪರೀತ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸೀಲ್ಡೌನ್ ಗೆ ಮುಂದಾಗಿದೆ. ಹೆಚ್ಚು ಪ್ರಕರಣ ಪತ್ತೆ ಆಗಿರುವ ಮನೆಗಳಿಗೆ ಸೀಲ್ ಡೌನ್ ಮಾಡಲಾಗುತ್ತಿದೆ. ಇನ್ನು ಹೈರಿಸ್ಕ್ ರಾಜ್ಯದಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯವಾಗಿದೆ. 

ಅದು ಕೂಡ ಬಿಬಿಎಂಪಿ ಸೂಚಿಸಿದ ಸ್ಥಳದಲ್ಲಿಯೇ ಕ್ವಾರಂಟೈನ್ ಆಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. 

ಕ್ವಾರಂಟೈನ್ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡಲಾಗುವುದು. ಟೆಸ್ಟ್‌ನಲ್ಲಿ ನೆಗೆಟಿವ್ ವರದಿ ಬಂದರಷ್ಟೇ ಮನೆಗೆ ವಾಪಸ್ ಕಳಿಸಲಾಗುತ್ತೆ. ಕೇರಳದಿಂದ ಬರುವವರು ಕೋವಿಡ್ ನೆಗೆಟಿವ್ ವರದಿ ತರಬೇಕು ಎಂದರು.

ಬಿಬಿಎಂಪಿ ಈಗಾಗಲೇ ನಿರ್ಮಾಣ ಮಾಡಿರುವ ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಬಿಬಿಎಂಪಿ ಎಂಟು ವಲಯದಲ್ಲೂ ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಿದೆ. ಹೈ ರಿಸ್ಕ್ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಅಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ. ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಆದರೆ ಹಣ ಪಾವತಿಸಬೇಕು. ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಣ ಪಾವತಿಸಬೇಕಾಗಿಲ್ಲ.

ವೀಕೆಂಡ್ ಲಾಕ್‌ಡೌನ್ ಬಗ್ಗೆ ಬಿಬಿಎಂಪಿ ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸಾಮಾನ್ಯ ಜನರು ಜೀವನ ನಡೆಸಬೇಕಾಗಿದೆ. ಕೊರೊನಾ ಸೋಂಕಿಗೆ ಪೂರ್ವ ಸಿದ್ಧತೆ ಆಗಬೇಕಾಗಿದೆ. ಸರ್ಕಾರದ ಹಂತದಲ್ಲಿ ಅಂತಿಮ‌ ತೀರ್ಮಾನ ಆಗಲಿದೆ. ಕೊರೊನಾ ಕೇಸ್‌ಗಳು 500ಕ್ಕಿಂತ ಕಡಿಮೆ ಬರುತ್ತಿದೆ. ಕಂಟೇನ್‌ಮೆಂಟ್ ವಿಚಾರದಲ್ಲಿ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಈಗಾಗಲೇ ನಿರ್ಮಾಣ ಮಾಡಿರುವ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಬಿಬಿಎಂಪಿ ಎಂಟು ವಲಯದಲ್ಲೂ ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಿದೆ. ಹೈ ರಿಸ್ಕ್ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಅಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಆದರೆ ಹಣ ಪಾವತಿಸಬೇಕು. ಕೊವಿಡ್ ಕೇರ್ ಸೆಂಟರ್‌ನಲ್ಲಿ ಹಣ ಪಾವತಿಸಬೇಕಾಗಿಲ್ಲ.

ವೀಕೆಂಡ್ ಲಾಕ್‌ಡೌನ್ ಬಗ್ಗೆ ಬಿಬಿಎಂಪಿ ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸಾಮಾನ್ಯ ಜನರು ಜೀವನ ನಡೆಸಬೇಕಾಗಿದೆ. ಕೊರೊನಾ ಸೋಂಕಿಗೆ ಪೂರ್ವ ಸಿದ್ಧತೆ ಆಗಬೇಕಾಗಿದೆ. ಸರ್ಕಾರದ ಹಂತದಲ್ಲಿ ಅಂತಿಮ‌ ತೀರ್ಮಾನ ಆಗಲಿದೆ. ಕೊರೊನಾ ಕೇಸ್‌ಗಳು 500ಕ್ಕಿಂತ ಕಡಿಮೆ ಬರುತ್ತಿದೆ. ಕಂಟೇನ್‌ಮೆಂಟ್ ವಿಚಾರದಲ್ಲಿ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು