1:33 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಹೆದ್ದಾರಿ ಕಾಮಗಾರಿ: ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ್ ಭಟ್ ಮನೆಯ ಆವರಣ ಗೋಡೆ ಕುಸಿತ; ವಾಹನ ಜಖಂ

28/01/2022, 14:20

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದ್ದು, ದ್ವಿಚಕ್ರ ವಾಹನ ಕೂಡ ಜಖಂ ಆಗಿದೆ.

ಗುರುವಾರ ರಾತ್ರಿ ವೇಳೆ ಈ ಘಟನೆ ನಡೆದಿದೆ. ಗೋಡೆ ಬಿದ್ದ ವೇಳೆ ಸ್ಥಳದಲ್ಲಿದ್ದ ದ್ವಿಚಕ್ರ ವಾಹನವೊಂದು ಜಖಂ ಆಗಿದೆ.

ಈ ನಡುವೆ ಹೆದ್ದಾರಿಯ ಚತುಷ್ಪಥ ರಸ್ತೆ ಅಗಲೀಕರಣ ಕಾಮಗಾರಿಗಾಗಿ ಕಲ್ಲಡ್ಕ ಪೇಟೆಯಲ್ಲಿ ಎಷ್ಟು ಮೀಟರ್ ರಸ್ತೆ ಅಗಲೀಕರಣಗೊಳ್ಳುತ್ತದೆ ಎಂಬುದರ ಸ್ಪಷ್ಟವಾದ ಲೆಕ್ಕ ನೀಡದೆ ಜನ ಗೊಂದಲಕ್ಕೀಡಾಗಿದ್ದಾರೆ.

ಕಲ್ಲಡ್ಕ ಪೇಟೆಯಲ್ಲಿ ಫ್ಲೈಓವರ್ ನಿರ್ಮಾಣದ ಪ್ಲಾನ್ ತಯಾರಿಸಿದ ಬಳಿಕ ರಸ್ತೆಯ ಇಕ್ಕೆಲಗಳು ಬಾಕಿ ಉಳಿದ ಕಡೆಗಳಿಗಿಂತ ಕಡಿಮೆ ಜಾಗ ಸ್ವಾಧೀನ
ಮಾಡುತ್ತಾರೆ ಎಂಬ ಮಾಹಿತಿ ಇದೆ.

ಫ್ಲೈ ಓವರ್ ನ ಎರಡು ಬದಿಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣಗೊಳ್ಳುತ್ತದೆ. ಈಗಾಗಿ ರಸ್ತೆ ಅಗಲೀಕರಣ ದ ಸರಿಯಾದ ಸರ್ವೆ ಕಾರ್ಯ ಇನ್ನೂ

ಮುಗಿದಿಲ್ಲ ಎಂಬುದು ಸ್ಥಳೀಯರ ಮಾತು. ಹಾಗಾಗಿ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಎರಡು ಬಾರಿ ನಿರ್ಮಾಣ ಮಾಡಲಾಗಿತ್ತು.

ಒಂದು ಬಾರಿ ರಸ್ತೆ ಅಗಲೀಕರಣಕ್ಕಾಗಿ ಕೆಂಪು ಕಲ್ಲು ಬಳಸಿ ಕಟ್ಟಲಾಗಿತ್ತು. ಅ ಬಳಿಕ ಮತ್ತೆ ಕಾಂಕ್ರೀಟ್ ಸಿಮೆಂಟ್ ಮೂಲಕ ತಡೆಗೋಡೆ ರೀತಿಯಲ್ಲಿ ಕಾಂಪೌಂಡ್ ಗೋಡೆ ನಿರ್ಮಿಸಗಿತ್ತಾದರೂ ಯಾವುದೇ ಪ್ರಯೋಜನಕ್ಕೆ ಬಾರದೆ ನೆಲಸಮವಾಗಿದೆ.

ರಸ್ತೆ ಅಗಲೀಕರಣ ಕಾಮಗಾರಿ ಜೊತೆ ಸರಾಗವಾಗಿ ಮಳೆ ನೀರು ಹರಿದು ಹೋಗುವ ಉದ್ದೇಶದಿಂದ ಅಲ್ಲಲ್ಲಿ ಸಿಮೆಂಟ್ ಪೈಪ್ ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಕಲ್ಲಡ್ಕ ಮುಖ್ಯಪೇಟೆಯಲ್ಲಿರುವ ಡಾ. ಪ್ರಭಾಕರ್ ಭಟ್ ಅವರ ಮನೆಯ ಮುಂಭಾಗದಲ್ಲಿ ಕೂಡ ಸಿಮೆಂಟ್ ಪೈಪ್ ಅಳವಡಿಕೆಗಾಗಿ ಕಾಂಪೌಂಡ್ ನ ಸುತ್ತ ಅಗೆಯಲಾಗಿತ್ತು.

ಕಾಂಪೌಂಡ್‌ನ ಬದಿಯಲ್ಲಿ ಮತ್ತು ಅಡಿಪಾಯದ ವರಗೆ ಅಗೆದ ಪರಿಣಾಮ ಜೊತೆಗೆ ಸಡಿಲ ಮಣ್ಣಿನ ಕಾರಣದಿಂದ ಕಾಂಪೌಂಡ್ ಗೋಡೆ ಜರಿದು ಬಿದ್ದಿದೆ.

ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್ ಕಂಪೆನಿ ಸ್ಥಳೀಯರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸುವಂತೆ ಮತ್ತು ರಸ್ತೆ ಅಗಲೀಕರಣ ದ ಸರಿಯಾದ ಸರ್ವೇ ಕಾರ್ಯದ ಮಾಹಿತಿ ನೀಡುವಂತೆ ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು