9:06 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಹೆದ್ದಾರಿ ಕಾಮಗಾರಿ: ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ್ ಭಟ್ ಮನೆಯ ಆವರಣ ಗೋಡೆ ಕುಸಿತ; ವಾಹನ ಜಖಂ

28/01/2022, 14:20

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದ್ದು, ದ್ವಿಚಕ್ರ ವಾಹನ ಕೂಡ ಜಖಂ ಆಗಿದೆ.

ಗುರುವಾರ ರಾತ್ರಿ ವೇಳೆ ಈ ಘಟನೆ ನಡೆದಿದೆ. ಗೋಡೆ ಬಿದ್ದ ವೇಳೆ ಸ್ಥಳದಲ್ಲಿದ್ದ ದ್ವಿಚಕ್ರ ವಾಹನವೊಂದು ಜಖಂ ಆಗಿದೆ.

ಈ ನಡುವೆ ಹೆದ್ದಾರಿಯ ಚತುಷ್ಪಥ ರಸ್ತೆ ಅಗಲೀಕರಣ ಕಾಮಗಾರಿಗಾಗಿ ಕಲ್ಲಡ್ಕ ಪೇಟೆಯಲ್ಲಿ ಎಷ್ಟು ಮೀಟರ್ ರಸ್ತೆ ಅಗಲೀಕರಣಗೊಳ್ಳುತ್ತದೆ ಎಂಬುದರ ಸ್ಪಷ್ಟವಾದ ಲೆಕ್ಕ ನೀಡದೆ ಜನ ಗೊಂದಲಕ್ಕೀಡಾಗಿದ್ದಾರೆ.

ಕಲ್ಲಡ್ಕ ಪೇಟೆಯಲ್ಲಿ ಫ್ಲೈಓವರ್ ನಿರ್ಮಾಣದ ಪ್ಲಾನ್ ತಯಾರಿಸಿದ ಬಳಿಕ ರಸ್ತೆಯ ಇಕ್ಕೆಲಗಳು ಬಾಕಿ ಉಳಿದ ಕಡೆಗಳಿಗಿಂತ ಕಡಿಮೆ ಜಾಗ ಸ್ವಾಧೀನ
ಮಾಡುತ್ತಾರೆ ಎಂಬ ಮಾಹಿತಿ ಇದೆ.

ಫ್ಲೈ ಓವರ್ ನ ಎರಡು ಬದಿಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣಗೊಳ್ಳುತ್ತದೆ. ಈಗಾಗಿ ರಸ್ತೆ ಅಗಲೀಕರಣ ದ ಸರಿಯಾದ ಸರ್ವೆ ಕಾರ್ಯ ಇನ್ನೂ

ಮುಗಿದಿಲ್ಲ ಎಂಬುದು ಸ್ಥಳೀಯರ ಮಾತು. ಹಾಗಾಗಿ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಎರಡು ಬಾರಿ ನಿರ್ಮಾಣ ಮಾಡಲಾಗಿತ್ತು.

ಒಂದು ಬಾರಿ ರಸ್ತೆ ಅಗಲೀಕರಣಕ್ಕಾಗಿ ಕೆಂಪು ಕಲ್ಲು ಬಳಸಿ ಕಟ್ಟಲಾಗಿತ್ತು. ಅ ಬಳಿಕ ಮತ್ತೆ ಕಾಂಕ್ರೀಟ್ ಸಿಮೆಂಟ್ ಮೂಲಕ ತಡೆಗೋಡೆ ರೀತಿಯಲ್ಲಿ ಕಾಂಪೌಂಡ್ ಗೋಡೆ ನಿರ್ಮಿಸಗಿತ್ತಾದರೂ ಯಾವುದೇ ಪ್ರಯೋಜನಕ್ಕೆ ಬಾರದೆ ನೆಲಸಮವಾಗಿದೆ.

ರಸ್ತೆ ಅಗಲೀಕರಣ ಕಾಮಗಾರಿ ಜೊತೆ ಸರಾಗವಾಗಿ ಮಳೆ ನೀರು ಹರಿದು ಹೋಗುವ ಉದ್ದೇಶದಿಂದ ಅಲ್ಲಲ್ಲಿ ಸಿಮೆಂಟ್ ಪೈಪ್ ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಕಲ್ಲಡ್ಕ ಮುಖ್ಯಪೇಟೆಯಲ್ಲಿರುವ ಡಾ. ಪ್ರಭಾಕರ್ ಭಟ್ ಅವರ ಮನೆಯ ಮುಂಭಾಗದಲ್ಲಿ ಕೂಡ ಸಿಮೆಂಟ್ ಪೈಪ್ ಅಳವಡಿಕೆಗಾಗಿ ಕಾಂಪೌಂಡ್ ನ ಸುತ್ತ ಅಗೆಯಲಾಗಿತ್ತು.

ಕಾಂಪೌಂಡ್‌ನ ಬದಿಯಲ್ಲಿ ಮತ್ತು ಅಡಿಪಾಯದ ವರಗೆ ಅಗೆದ ಪರಿಣಾಮ ಜೊತೆಗೆ ಸಡಿಲ ಮಣ್ಣಿನ ಕಾರಣದಿಂದ ಕಾಂಪೌಂಡ್ ಗೋಡೆ ಜರಿದು ಬಿದ್ದಿದೆ.

ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್ ಕಂಪೆನಿ ಸ್ಥಳೀಯರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸುವಂತೆ ಮತ್ತು ರಸ್ತೆ ಅಗಲೀಕರಣ ದ ಸರಿಯಾದ ಸರ್ವೇ ಕಾರ್ಯದ ಮಾಹಿತಿ ನೀಡುವಂತೆ ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು