1:22 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಹೀಗೂ ಉಂಟೇ?!: ಗಂಡನನ್ನೇ 5 ಲಕ್ಷಕ್ಕೆ ಮಾರಿದ ಪತ್ನಿ; ಹಣ ಸಂದಾಯದ ವೇಳೆ ತಾಳಿ ಬಿಚ್ಚಿ ಕೊಡಲು ಒಪ್ಪಿಗೆ !

24/10/2021, 18:03

ಮಂಡ್ಯ:reporterkarnataka.com
ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಗಂಡನನ್ನೇ ಹೆಂಡತಿ 5 ಲಕ್ಷ ರೂಪಾಯಿಗೆ ಗಂಡನ ಪ್ರಿಯತಮೆಗೆ ಮಾರಿದ ವಿಚಿತ್ರ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ವಿವರ: ರಮ್ಯ ಎಂಬುವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಪತ್ನಿ ಕೈಗೆ ಸಿಕ್ಕಿ ಬಿದ್ದಿದ್ದ. ಈ ವೇಳೆ ಪತ್ನಿ ಮತ್ತು ಪ್ರಿಯತಮೆಯ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಮಾರಾಮಾರಿ ನಡೆದು ನ್ಯಾಯ ತೀರ್ಮಾನಕ್ಕಾಗಿ ವಿಷಯ ಪಂಚಾಯಿತಿ ಕಟ್ಟೆಗೆ ಬಂದಿತ್ತು.

ಪಂಚಾಯಿತಿಯಲ್ಲಿ ವಾದ ಪ್ರತಿವಾದಗಳು ನಡೆದವು ಕೊನೆಯಲ್ಲಿ ಪ್ರಿಯತಮೆ ಹೇಳಿಕೆ ಪ್ರಕಾರ ನಿನ್ನ ಗಂಡ ನನ್ನ ಬಳಿ 5 ಲಕ್ಷ ರೂ ಸಾಲ ಪಡೆದಿದ್ದಾನೆ ಅದನ್ನು ತೀರಿಸಿ ನಿನ್ನ ಗಂಡನನ್ನು ಕರೆದುಕೊಂಡು ಹೋಗು ಎಂದು ಸಂಬಂಧ ಇಟ್ಟು ಕೊಂಡಿದ್ದ ಮಹಿಳೆ ಪಂಚಾಯಿತಿಯಲ್ಲಿ ಬೇಡಿಕೆ ಇಟ್ಟಿದ್ದಾಳೆ. ಇದನ್ನು ಕೇಳಿದ ಪತ್ನಿ ಇಂತಹ ಗಂಡ ನನಗೆ ಬೇಕಿಲ್ಲ. ಪೊಲೀಸ್ ಸ್ಟೇಷನ್‌ಗೆ ಹೋಗಿ ಕೇಸ್ ಹಾಕಿ ನಿಮ್ಮನ್ನು ಕೋರ್ಟ್ ಕಚೇರಿ ಅಲೆಸ್ತಿನಿ ಎಂದು ವಾದ ಮಾಡಿದ್ದಾಳೆ.

ಕಡೆಗೆ ಜೀವನಾಂಶಕ್ಕಾಗಿ ಪತ್ನಿ ಪತಿಗೆ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದಾಳೆ, ಪ್ರಿಯತಮೆ 5 ಲಕ್ಷ ನಾನೇ ಕೊಡ್ತಿನಿ ಗಂಡನನ್ನು ಬಿಡುವಂತೆ ಪತ್ನಿಗೆ ಷರತ್ತು ಹಾಕಿದ್ದಾಳೆ. ಷರತ್ತಿಗೆ ಒಪ್ಪಿದ ಪತ್ನಿ ಮುಂದಿನ ತಿಂಗಳು ಹಣ ಕೊಟ್ಟು ಗಂಡನನ್ನು ಖರೀದಿಸುವಂತೆ ಸೂಚಿಸಿದ್ದಾಳೆ. ಹಣ ಕೊಟ್ಟ ವೇಳೆ ತಾಳಿ ಬಿಚ್ಚಿಟ್ಟು ಒಪ್ಪಂದ ಪತ್ರಕ್ಕೆ ಸಹಿ ಹಾಕಲು ಹೆಂಡತಿಯೂ ಒಪ್ಪಿಗೆ ನೀಡಿರುತ್ತಾಳೆ, ರಾಜಿ ಪಂಚಾಯಿತಿಯಲ್ಲಾದ ಮಹಿಳೆಯರಿಬ್ಬರ ಹಣದ ನ್ಯಾಯ ತೀರ್ಮಾನವನ್ನು ಕಂಡ ಗ್ರಾಮಸ್ಥರು ದಂಗಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು