5:51 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ

01/08/2025, 14:07

ಬೆಂಗಳೂರು(reporterkarnataka.com): ಧರ್ಮಸ್ಥಳದಲ್ಲಿ ಸಮಾಧಿ ಉತ್ಖನನ ವೇಳೆ ಸ್ಪಾಟ್ ನಂ.1ರಲ್ಲಿ ದೊರೆತ ಡೆಬಿಟ್‌ ಮತ್ತು ಪ್ಯಾನ್‌ ಕಾ‌ರ್ಡ್‌ನ ವಾರಸುದಾರರು ಪತ್ತೆಯಾಗಿದ್ದು, ಧರ್ಮಸ್ಥಳದ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಡೆಬಿಟ್ ಹಾಗೂ ಪಾನ್ ಕಾರ್ಡ್ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ನಿವಾಸಿಯಾಗಿದ್ದ ಸುರೇಶ್ ಮತ್ತು ಆತನ ತಾಯಿ ಸಿದ್ದಲಕ್ಷ್ಮಮ್ಮ ಎಂಬವರದ್ದು ಎಂದು ತನಿಖೆಯ ವೇಳೆ ತಿಳಿದು ಬಂದಿದೆ.
ದಾಬಸ್‌ಪೇಟೆಯ ನಿವಾಸಿಯಾದ ಗಂಗಮರಿಯಪ್ಪ ಹಾಗೂ ಸಿದ್ದಲಕ್ಷ್ಮಮ್ಮ ಎಂಬುವರ ಪುತ್ರ ಸುರೇಶ್ ಪರ್ಸ್‌ನಲ್ಲಿ ಎರಡು ಪ್ಯಾನ್‌ ಕಾರ್ಡ್‌ಗಳು ಪತ್ತೆಯಾಗಿತ್ತು. ಒಂದು ಸುರೇಶ್‌ ಎಂಬಾತನ ಪ್ಯಾನ್‌ ಕಾರ್ಡ್ , ಮತ್ತೊಂದು ಅವರ ತಾಯಿ ಸಿದ್ದಲಕ್ಷ್ಮಮ್ಮ ಅವರ ಪ್ಯಾನ್ ಕಾರ್ಡ್ ಎಂಬುದು ಬಹಿರಂಗವಾಗಿತ್ತು. 2‌ ವರ್ಷಗಳ ಹಿಂದೆ ಮನೆ ಬಿಟ್ಟು ತೆರಳಿದ್ದ ಸುರೇಶ್ ಆಗ ಧರ್ಮಸ್ಥಳಕ್ಕೆ ತೆರಳಿದ್ದ ಎನ್ನಲಾಗಿದೆ. ಮಾರ್ಚ್ ತಿಂಗಳಲ್ಲಿ ಜಾಂಡಿಸ್‌ನಿಂದಾಗಿ ಸುರೇಶ್ ಸಾವನ್ನಪ್ಪಿದ್ದ. ಇನ್ನು ಸಿದ್ದಲಕ್ಷ್ಮಮ್ಮ ಬದುಕಿದ್ದಾರೆ. ಈ ಕುರಿತು ಸುರೇಶ್‌ ಕುಟುಂಬಸ್ಥರು ಪ್ರತಿಕ್ರಿಯೆ ನೀಡಿದ್ದಾರೆ.

ಮೃತ ಸುರೇಶ್ ಅಕ್ಕ ರೂಪಾ ಮಾತನಾಡಿ, ಸಾಕಷ್ಟು ಬಾರಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಆಗ ಡೆಬಿಟ್ ಹಾಗೂ ಪಾನ್ ಕಾರ್ಡ್ ಧರ್ಮಸ್ಥಳದಲ್ಲಿ ಮಿಸ್ ಆಗಿರಬೇಕು. ನಮ್ಮ ತಾಯಿಯ ಎಟಿಎಂ ಕಾರ್ಡ್ ಕಳೆದು ಹೋಗಿದೆ ಎಂದು ಹೇಳಿದ್ದ. ಆಗ ನಮ್ಮ ತಾಯಿ ಹೊಸ ಎಟಿಎಂ ಕಾರ್ಡ್ ತೆಗೆದುಕೊಂಡಿದ್ದರು. ಸುರೇಶ್‌ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ, 5 ತಿಂಗಳ ಹಿಂದೆ ಇಲ್ಲೇ ಮೃತಪಟ್ಟಿದ್ದರು. ಧರ್ಮಸ್ಥಳದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ಮೃತ ಸುರೇಶ್ ತಾಯಿ ಮಾತನಾಡಿ, ಅಲ್ಲಿ ಸಿಕ್ಕ ದಾಖಲೆಗಳು ನನ್ನದು ಹಾಗೂ ನನ್ನ ಮಗನದ್ದೇ, ಈ ಹಿಂದೆ ಧರ್ಮಸ್ಥಳಕ್ಕೆ ಹೋದಾಗ ಕಳೆದು ಹೋಗಿದೆ ಎಂದು ಮಗ ಸುರೇಶ್ ಹೇಳಿದ್ದ. ಸುರೇಶ್ ಅನಾರೋಗ್ಯದಿಂದ ಮೃತ ಪಟ್ಟಿದ್ದಾನೆ. ನನ್ನ ಎಟಿಎಂ ಕಾರ್ಡ್ ಸುರೇಶ್ ಬಳಿ ಇತ್ತು, ಅಲ್ಲಿ ಹೋದಾಗ ಕಳೆದು ಹೋಗಿದೆ. ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ಅನಾರೋಗ್ಯದಿಂದ ಮೃತ ಪಟ್ಟಿದ್ದಾನೆ. ಧರ್ಮಸ್ಥಳ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲವೆಂದು ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು