12:34 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹೆಜಮಾಡಿ ಕೋಡಿಯಲ್ಲಿ ಮೀನುಗಾರಿಕೆ ಬಂದರು, ಧಾರವಾಡ ಮಹಾನಗರ ಪಾಲಿಕೆ ರಚನೆ: ರಾಜ್ಯ ಸಚಿವ ಸಂಪುಟ ಒಪ್ಪಿಗೆ

02/01/2025, 23:25

ಬೆಂಗಳೂರು(reporterkarnataka.com): ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ಕರ್ನಾಟಕ ಸಾಂಸ್ಕೃತಿ ಕೇಂದ್ರವಾಗಿದೆ. ಮೂರು ಜ್ಞಾನಪೀಠ ಪ್ರಶಸ್ತಿಯವರ ಊರು ಧಾರವಾಡ ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸಿದೆ.
*ಬಂದರು ನಿರ್ಮಾಣಕ್ಕೆ ಅನುಮೋದನೆ;* ಕೇಂದ್ರ ಪುರಸ್ಕೃತ ಯೋಜನೆಯಡಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿನ ಮೀನುಗಾರಿಕೆ ಬಂದರು ನಿರ್ಮಾಣ ಕಾಮಗಾರಿಯ 209.13 ಕೋಟಿ ರೂ.ಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.ಕೇಂದ್ರ ಪುರಸ್ಕೃತ ಯೋಜನೆಯಡಿ ಹಾಲಿ ಇರುವ ಮೀನುಗಾರಿಕೆ ಬಂದರುಗಳ ಆಧುನೀಕರಣ ಹಾಗೂಮೀನುಗಾರಿಕೆ ಬಂದರು ಮತ್ತು ಇಳಿದಾಣ ಕೇಂದ್ರಗಳಲ್ಲಿ ನಿರ್ವಹಣಾ ಹೂಳೆತ್ತುವಿಕೆ ಯ ಕಾಮಗಾರಿಗಳ 84.57 ಕೋಟಿ ರೂ.ಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
*ಕೆಐಡಿಬಿ ಸಾಲದ ಮಿತಿ 5000 ಕೋಟಿ ರೂ. ಹೆಚ್ಚಳ:* ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹಣಕಾಸು ಸಂಸ್ಥೆಗಳಿಂದ ಪಡೆಯುವ ಸಾಲದ ಮಿತಿ ಪ್ರಸ್ತುತ ರೂ. 500 ಕೋಟಿ ಗಳಿದ್ದು, ಅದನ್ನು ರೂ. 5000 ಕೋಟಿಗಳಿಗೆ ಹೆಚ್ಚಿಸಲು ಅನುಮೋದನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು