2:58 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ಪತನ: ಗಂಭೀರ ಗಾಯಗೊಂಡಿದ್ದ ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ವಿಧಿವಶ; ಉನ್ನತ ಮಟ್ಟದ ತನಿಖೆ ಆರಂಭ

08/12/2021, 18:38

ಚೆನ್ನೈ(reporterkarnataka.com): ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಸಮೀಪ ಅಪಘಾತಕ್ಕೀಡಾದ ಸೇನಾ ಪಡೆಗೆ ಸೇರಿದ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಮೂರೂ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ.

ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17 ನೀಲಗಿರಿ ಜಿಲ್ಲೆಯ ಕೂನೂರು ಸಮೀಪ ಅಪಘಾತಕ್ಕೀಡಾಗಿತ್ತು. ಜನರಲ್ ರಾವತ್ ಅವರ ಪತ್ನಿ ಸೇರಿದಂತೆ ಹೆಲಿಕಾಪ್ಟರ್ ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು.

ಅಪಘಾತದಿಂದ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದರು. ಒಬ್ಬರು ಕಾಣೆಯಾಗಿದ್ದರು.

ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ಕಡೆಗೆ ಹೊರಟಿತ್ತು. ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು