1:13 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವರ ದುರ್ಮರಣ; ಅಣೆಕಟ್ಟನ್ನು ಉದ್ಘಾಟಿಸಿ ವಾಪಸಾಗುತ್ತಿದ್ದಾಗ ದುರ್ಘಟನೆ

20/05/2024, 10:38

ತಬ್ರಿಜ್ಗೆ(reporterkarnataka.com): ಬೆಟ್ಟ ಪ್ರದೇಶದಲ್ಲಿ ತಾನು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಹಿನ್ನೆಲೆಯಲ್ಲಿ
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸಂಪರ್ಕ ಕಳೆದುಕೊಂಡಿದ್ದ ಅವರ ಹೆಲಿಕಾಪ್ಟರ್ ಪತನಗೊಂಡಿದ್ದು ಪತ್ತೆಯಾಗಿದ್ದು, ಹೆಲಿಕಾಪ್ಟರ್ ನಲ್ಲಿರುವ ಯಾರೂ ಬದುಕುಳಿದಿರುವ ಸಾಧ್ಯತೆಗಳಿಲ್ಲ ಎಂದು ಅಲ್ಲಿನ ಟಿವಿ ವರದಿ ಮಾಡಿದೆ.
ಹೆಲಿಕಾಪ್ಟರ್ ಪತ್ತೆಯಾಗಿದೆ ಆದರೆ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಇರಾನ್ನ ರೆಡ್ ಕ್ರೆಸೆಂಟ್ ಮುಖ್ಯಸ್ಥರು ಹೇಳಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮಿರಾಬ್ಡೊಲ್ಲಿಯನ್ ಅವರು ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು.
ಇರಾನ್ ಅಧ್ಯಕ್ಷ ರೈಸಿ ಮತ್ತು ಅಜೆರ್ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ತಮ್ಮ ಹಂಚಿಕೆಯ ಗಡಿಯಲ್ಲಿರುವ ಕ್ವಿಜ್ ಖಲಾಸಿ ಅಣೆಕಟ್ಟನ್ನು ಉದ್ಘಾಟಿಸಿದ ನಂತರ ಅಧ್ಯಕ್ಷ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್ ಮತ್ತು ಇತರ ಅಧಿಕಾರಿಗಳನ್ನು ಹೊತ್ತ ಹೆಲಿಕಾಪ್ಟರ್ ಇರಾನ್ ನಗರ ತಬ್ರಿಜ್ಗೆ ಹೊರಟಿತ್ತು. ಹೆಲಿಕಾಪ್ಟರ್ ಟೇಕ್ ಆಪ್ ಆಗಿ ಸುಮಾರು 30 ನಿಮಿಷಗಳ ನಂತರ ಸಂಪರ್ಕವನ್ನು ಕಳೆದುಕೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು