12:26 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹೇಳಿಕೆ ವಿವಾದ: ಬಂಧಿತ ಕೇಂದ್ರ ಸಚಿವ ನಾರಾಯಣ ರಾಣೆಗೆ ಜಾಮೀನು ಮಂಜೂರು

25/08/2021, 15:03

ಮುಂಬೈ(reporterkarnataka.com): 
ಕೇಂದ್ರ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ್ ರಾಣೆ ಅವರಿಗೆ ಮಂಗಳವಾರ ರಾತ್ರಿ ಮಹಾಡ್ ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಪಾಳಕ್ಕೆ ಬಾರಿಸುವೆ ಎಂಬ ಹೇಳಿಕೆ ನೀಡಿರುವುದಕ್ಕೆ ಮಹಾರಾಷ್ಟ್ರದ ವಿವಿಧೆಡೆ ಶಿವಸೇನೆ ನಾಯಕರಿಂದ ದೂರು ದಾಖಲಾದ ಕಾರಣ ಮಂಗಳವಾರ ಮಧ್ಯಾಹ್ನ ಪೊಲೀಸರು ರಾಣೆ ಅವರನ್ನು ರತ್ನಗಿರಿಯಲ್ಲಿ ಬಂಧಿಸಿದ್ದರು.

ನಾರಾಯಣ ರಾಣೆ ಅವರು ಈ ಹಿಂದೆ ಶಿವಸೇನೆ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದರು. ನಂತರ ಅವರು ಕಾಂಗ್ರೆಸ್ ಸೇರಿದ್ದರು. ಬಳಿಕ ಬಿಜೆಪಿ ಸೇರ್ಪಡೆಗೊಂಡಿದ್ದರು. ಜುಲೈನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಸೇರ್ಪಡೆಯಾಗಿ ಸಚಿವರಾದರು.

ಇತ್ತೀಚಿನ ಸುದ್ದಿ

ಜಾಹೀರಾತು