9:29 AM Friday16 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು: ಜನ, ಜಾನುವಾರು, ಜಲಚರಗಳಿಗೆ ಕಂಟಕ; ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ

29/01/2023, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com

ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಜಿ ಅಗ್ರಹಾರ ಸಮೀಪ ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು ಬಿಟ್ಟಿದ್ದು ಹೇಮವತಿ ನದಿ ಕಲುಷಿತವಾಗಿದ್ದು ಜನ ಜಾನುವಾರುಗಳಿಗೆ ಹಾಗೂ ಜಲಚರಗಳಿಗೆ ಮಾರಕವಾಗಿದೆ. ಅಧಿಕಾರಿ ಸಿಬ್ಬಂದಿಗಳಲ್ಲಿ ವಿನಂತಿ ಜೀ ಅಗ್ರಹಾರ ಭಾಗದಿಂದ ಕೆಳಗೆ ಸಿಗಳ್ಳಿ ಚಕ್ಕುಡಿಗೆ ಅಚ್ಚರಡಿ ಭಾಗವಾಗಿ ಹರಿಯುತ್ತಿರುವ ಹೇಮಾವತಿ ನದಿ ನೀರು ಯಾರೂ ಅನಾಗರಿಕರು ರಾತ್ರಿ ಸಮಯದಲ್ಲಿ ರೋಬೆಸ್ಟ್ ಕಾಫಿ ಪಲ್ಪರ್ ಮಾಡಿ ಅದರ ಕಲುಷಿತ ನೀರನ್ನು ಹೇಮಾವತಿ ನದಿಗೆ ಹರಿಬಿಡುತ್ತಿದ್ದಾರೆ.


ಈ ನೀರನ್ನು ಕುಡಿದ ಅನೇಕ ಜಲಚರ ಪ್ರಾಣಿಗಳು, ಸಾವಿರಾರು ಜಾನುವಾರುಗಳು ಅಷ್ಟೇ ಯಾಕೆ ಮನುಷ್ಯರು ಸಹ ಈ ನೀರನ್ನು ಕುಡಿದು ಅನಾರೋಗ್ಯಕ್ಕೆ ತುತ್ತಾಗುವ ಮುಂಚೆ ತಹಸೀಲ್ದಾರರು ಇತ್ತ ಗಮನಹರಿಸಿ ಯಾರು ಇಂತ ಅನಾಗರಿಕೆ ಕೆಲಸ ಮಾಡುತ್ತೀದ್ದನೋ ಅಂಥವರಿಗೆ ಶಿಕ್ಷೆ ಕೊಡಿಸಬೇಕು. ಹೇಮಾವತಿ ನದಿಯ ದಡದ ಮೇಲೆ ನಡೆದುಕೊಂಡು ಹೋದರು ಈ ಪಲ್ಪರ್ ಘಾಟು ಬರುತ್ತಿದೆ. ನೀರು ಪೂರ್ತಿ ಕಪ್ಪು ಬಣ್ಣದಿಂದ ಕೂಡಿರುತ್ತದೆ ದಯವಿಟ್ಟು ಅಧಿಕಾರಿಗಳು ಇವತ್ತೇ ಸ್ಥಳಕ್ಕೆ ಬಂದು ಪರಿಶೀಲಿಸಿ ಕೂಡಲೆ ಕ್ರಮ ಜರುಗಿಸಿ ಇಲ್ಲವಾದಲ್ಲಿ ಲಕ್ಷಾಂತರ ಜಲಚರ ಜೀವಿಗಳು ಸರ್ವ ನಾಶವಾಗುತ್ತವೆ

ಇತ್ತೀಚಿನ ಸುದ್ದಿ

ಜಾಹೀರಾತು