9:08 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು: ಜನ, ಜಾನುವಾರು, ಜಲಚರಗಳಿಗೆ ಕಂಟಕ; ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ

29/01/2023, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com

ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಜಿ ಅಗ್ರಹಾರ ಸಮೀಪ ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು ಬಿಟ್ಟಿದ್ದು ಹೇಮವತಿ ನದಿ ಕಲುಷಿತವಾಗಿದ್ದು ಜನ ಜಾನುವಾರುಗಳಿಗೆ ಹಾಗೂ ಜಲಚರಗಳಿಗೆ ಮಾರಕವಾಗಿದೆ. ಅಧಿಕಾರಿ ಸಿಬ್ಬಂದಿಗಳಲ್ಲಿ ವಿನಂತಿ ಜೀ ಅಗ್ರಹಾರ ಭಾಗದಿಂದ ಕೆಳಗೆ ಸಿಗಳ್ಳಿ ಚಕ್ಕುಡಿಗೆ ಅಚ್ಚರಡಿ ಭಾಗವಾಗಿ ಹರಿಯುತ್ತಿರುವ ಹೇಮಾವತಿ ನದಿ ನೀರು ಯಾರೂ ಅನಾಗರಿಕರು ರಾತ್ರಿ ಸಮಯದಲ್ಲಿ ರೋಬೆಸ್ಟ್ ಕಾಫಿ ಪಲ್ಪರ್ ಮಾಡಿ ಅದರ ಕಲುಷಿತ ನೀರನ್ನು ಹೇಮಾವತಿ ನದಿಗೆ ಹರಿಬಿಡುತ್ತಿದ್ದಾರೆ.


ಈ ನೀರನ್ನು ಕುಡಿದ ಅನೇಕ ಜಲಚರ ಪ್ರಾಣಿಗಳು, ಸಾವಿರಾರು ಜಾನುವಾರುಗಳು ಅಷ್ಟೇ ಯಾಕೆ ಮನುಷ್ಯರು ಸಹ ಈ ನೀರನ್ನು ಕುಡಿದು ಅನಾರೋಗ್ಯಕ್ಕೆ ತುತ್ತಾಗುವ ಮುಂಚೆ ತಹಸೀಲ್ದಾರರು ಇತ್ತ ಗಮನಹರಿಸಿ ಯಾರು ಇಂತ ಅನಾಗರಿಕೆ ಕೆಲಸ ಮಾಡುತ್ತೀದ್ದನೋ ಅಂಥವರಿಗೆ ಶಿಕ್ಷೆ ಕೊಡಿಸಬೇಕು. ಹೇಮಾವತಿ ನದಿಯ ದಡದ ಮೇಲೆ ನಡೆದುಕೊಂಡು ಹೋದರು ಈ ಪಲ್ಪರ್ ಘಾಟು ಬರುತ್ತಿದೆ. ನೀರು ಪೂರ್ತಿ ಕಪ್ಪು ಬಣ್ಣದಿಂದ ಕೂಡಿರುತ್ತದೆ ದಯವಿಟ್ಟು ಅಧಿಕಾರಿಗಳು ಇವತ್ತೇ ಸ್ಥಳಕ್ಕೆ ಬಂದು ಪರಿಶೀಲಿಸಿ ಕೂಡಲೆ ಕ್ರಮ ಜರುಗಿಸಿ ಇಲ್ಲವಾದಲ್ಲಿ ಲಕ್ಷಾಂತರ ಜಲಚರ ಜೀವಿಗಳು ಸರ್ವ ನಾಶವಾಗುತ್ತವೆ

ಇತ್ತೀಚಿನ ಸುದ್ದಿ

ಜಾಹೀರಾತು