4:19 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಹೇಮಾವತಿ ಒಡಲಿಗೆ ವೇಸ್ಟ್ ಮೀನು ಸುರಿಯುವ ಮೀನು ವ್ಯಾಪಾರಿಗಳು: ಬಣಕಲ್ ನಲ್ಲಿ ಕೊಳೆತು ನಾರುತ್ತಿದೆ ನದಿ ತಟ; ಸಾಂಕ್ರಾಮಿಕ ರೋಗದ ಭೀತಿ

02/07/2024, 17:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಗ್ರಾಮದಲ್ಲಿ ಹೇಮಾವತಿ ನದಿ ನೀರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಗೂಡ್ಸ್ ವಾಹನಗಳಿಂದ ಹಾಗೂ ಮೀನು ವ್ಯಾಪಾರಸ್ಥರಿಂದ ನದಿ ಮಲೀನಗೊಳ್ಳುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮಂಗಳೂರಿನಿಂದ ಮಾರಾಟಕ್ಕೆಂದು ಮೀನು ತಂದು ಉಳಿದ ಮೀನನ್ನು ವ್ಯಾಪಾರಸ್ಥರು ಇಲ್ಲಿ ನದಿಗೆ ಎಸೆಯುತ್ತಿದ್ದಾರೆ.
ಮೀನಿನ ವೇಸ್ಟನ್ನೂ ಕೂಡ ನದಿಗೆ ಹಾಕಲಾಗುತ್ತಿದೆ.
ಬಣಕಲ್ ಪ್ರದೇಶದಲ್ಲಿ ಹೇಮಾವತಿ ನದಿ ತಟದಲ್ಲಿ ರಾಶಿ-ರಾಶಿ ಕೊಳೆತ ಮೀನು ಕಣ್ಣಿಗೆ ರಾಚುತ್ತಿದೆ. ವ್ಯಾಪಾರದ ಬಳಿಕ ಉಳಿದ ಕೊಳೆತ ಮೀನು ಹಾಗೂ ಮೀನಿನ ವೇಸ್ಟನ್ನು ಹೇಮಾವತಿ ನದಿಗೆ ಸುರಿದು ಗಾಡಿ ತೊಳೆದುಕೊಂಡು ಹೋಗುತ್ತಿದ್ದಾರೆ. ನಿತ್ಯ ಹೇಮಾವತಿ ನದಿ ದಡಕ್ಕೆ ಹತ್ತಾರು ಗೂಡ್ಸ್ ವಾಹನಗಳು ಬಂದು ಹೋಗುತ್ತವೆ.
ಹೇಮಾವತಿ ನದಿ ನೀರು ಗೊರೂರು ಡ್ಯಾಂ ಸೇರಿ ಕೆ.ಆರ್.ಎಸ್. ಮೂಲಕ ಬೆಂಗಳೂರು ತಲುಪುತ್ತದೆ.


ಹಾಸನ ಜಿಲ್ಲೆಯ ಜೀವನಾಡಿಯೇ ಹೇಮಾವತಿ ನದಿಯಾಗಿದೆ. ಮೂಡಿಗೆರೆ ತಾಲೂಕಿನ ನೂರಾರು ಹಳ್ಳಿಯ ಸಾವಿರಾರು ಎಕರೆ ಜಮೀನಿಗೆ ಇದೇ ನೀರು ಆಶ್ರಯ ನೀಡುತ್ತಿದೆ. ಈ ನೀರನ್ನು ಬಳಸಿದ್ರೆ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಅನ್ನೋದು ಸ್ಥಳಿಯರ ವಾದವಾಗಿದೆ.ಗೂಡ್ಸ್ ವಾಹನಗಳು, ಮೀನು ಮಾರಾಟಗಾರರ ಮೇಲೆ ಮೂಡಿಗೆರೆ ಜನರ ಕಿಡಿ ಕಾರಿದ್ದಾರೆ. ಗೂಡ್ಸ್ ವಾಹನಗಳ ಮಾಲೀಕರು, ಚಾಲಕರು ಹಾಗೂ ಮೀನು ಮಾರಾಟಗಾರರಿಗೆ ಮೂಡಿಗೆರೆ ಜನರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು