7:53 AM Friday5 - July 2024
ಬ್ರೇಕಿಂಗ್ ನ್ಯೂಸ್
ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ: ಉತ್ತರ ಕರ್ನಾಟಕದಲ್ಲೆಡೆ ಭಾರೀ ಸಂಭ್ರಮ ಮಂಗಳೂರಿನ ವಿವಿಧಡೆ ಟ್ರಾಫಿಕ್ ಪೊಲೀಸರಿಂದ ಕರ್ಕಶ ಹಾರ್ನ್, ಎಲ್ಇಡಿ ಲೈಟ್ ತೆರವು ಕಾರ್ಯಾಚರಣೆ ಹುಣಸಗಿ: ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ; ಸತ್ಸಂಗ ಸಂಜೀವಿನಿ ಕೂಟ ನೀಟ್ ಪರೀಕ್ಷೆ ಹಗರಣ: ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್, ಎನ್ ಎಸ್ ಯುಐ… ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ… ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್…

ಇತ್ತೀಚಿನ ಸುದ್ದಿ

ಹೇಮಾವತಿ ಒಡಲಿಗೆ ವೇಸ್ಟ್ ಮೀನು ಸುರಿಯುವ ಮೀನು ವ್ಯಾಪಾರಿಗಳು: ಬಣಕಲ್ ನಲ್ಲಿ ಕೊಳೆತು ನಾರುತ್ತಿದೆ ನದಿ ತಟ; ಸಾಂಕ್ರಾಮಿಕ ರೋಗದ ಭೀತಿ

02/07/2024, 17:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಗ್ರಾಮದಲ್ಲಿ ಹೇಮಾವತಿ ನದಿ ನೀರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಗೂಡ್ಸ್ ವಾಹನಗಳಿಂದ ಹಾಗೂ ಮೀನು ವ್ಯಾಪಾರಸ್ಥರಿಂದ ನದಿ ಮಲೀನಗೊಳ್ಳುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮಂಗಳೂರಿನಿಂದ ಮಾರಾಟಕ್ಕೆಂದು ಮೀನು ತಂದು ಉಳಿದ ಮೀನನ್ನು ವ್ಯಾಪಾರಸ್ಥರು ಇಲ್ಲಿ ನದಿಗೆ ಎಸೆಯುತ್ತಿದ್ದಾರೆ.
ಮೀನಿನ ವೇಸ್ಟನ್ನೂ ಕೂಡ ನದಿಗೆ ಹಾಕಲಾಗುತ್ತಿದೆ.
ಬಣಕಲ್ ಪ್ರದೇಶದಲ್ಲಿ ಹೇಮಾವತಿ ನದಿ ತಟದಲ್ಲಿ ರಾಶಿ-ರಾಶಿ ಕೊಳೆತ ಮೀನು ಕಣ್ಣಿಗೆ ರಾಚುತ್ತಿದೆ. ವ್ಯಾಪಾರದ ಬಳಿಕ ಉಳಿದ ಕೊಳೆತ ಮೀನು ಹಾಗೂ ಮೀನಿನ ವೇಸ್ಟನ್ನು ಹೇಮಾವತಿ ನದಿಗೆ ಸುರಿದು ಗಾಡಿ ತೊಳೆದುಕೊಂಡು ಹೋಗುತ್ತಿದ್ದಾರೆ. ನಿತ್ಯ ಹೇಮಾವತಿ ನದಿ ದಡಕ್ಕೆ ಹತ್ತಾರು ಗೂಡ್ಸ್ ವಾಹನಗಳು ಬಂದು ಹೋಗುತ್ತವೆ.
ಹೇಮಾವತಿ ನದಿ ನೀರು ಗೊರೂರು ಡ್ಯಾಂ ಸೇರಿ ಕೆ.ಆರ್.ಎಸ್. ಮೂಲಕ ಬೆಂಗಳೂರು ತಲುಪುತ್ತದೆ.


ಹಾಸನ ಜಿಲ್ಲೆಯ ಜೀವನಾಡಿಯೇ ಹೇಮಾವತಿ ನದಿಯಾಗಿದೆ. ಮೂಡಿಗೆರೆ ತಾಲೂಕಿನ ನೂರಾರು ಹಳ್ಳಿಯ ಸಾವಿರಾರು ಎಕರೆ ಜಮೀನಿಗೆ ಇದೇ ನೀರು ಆಶ್ರಯ ನೀಡುತ್ತಿದೆ. ಈ ನೀರನ್ನು ಬಳಸಿದ್ರೆ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಅನ್ನೋದು ಸ್ಥಳಿಯರ ವಾದವಾಗಿದೆ.ಗೂಡ್ಸ್ ವಾಹನಗಳು, ಮೀನು ಮಾರಾಟಗಾರರ ಮೇಲೆ ಮೂಡಿಗೆರೆ ಜನರ ಕಿಡಿ ಕಾರಿದ್ದಾರೆ. ಗೂಡ್ಸ್ ವಾಹನಗಳ ಮಾಲೀಕರು, ಚಾಲಕರು ಹಾಗೂ ಮೀನು ಮಾರಾಟಗಾರರಿಗೆ ಮೂಡಿಗೆರೆ ಜನರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು