9:07 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಹೇಮಾವತಿ ಒಡಲಿಗೆ ವೇಸ್ಟ್ ಮೀನು ಸುರಿಯುವ ಮೀನು ವ್ಯಾಪಾರಿಗಳು: ಬಣಕಲ್ ನಲ್ಲಿ ಕೊಳೆತು ನಾರುತ್ತಿದೆ ನದಿ ತಟ; ಸಾಂಕ್ರಾಮಿಕ ರೋಗದ ಭೀತಿ

02/07/2024, 17:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಗ್ರಾಮದಲ್ಲಿ ಹೇಮಾವತಿ ನದಿ ನೀರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಗೂಡ್ಸ್ ವಾಹನಗಳಿಂದ ಹಾಗೂ ಮೀನು ವ್ಯಾಪಾರಸ್ಥರಿಂದ ನದಿ ಮಲೀನಗೊಳ್ಳುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮಂಗಳೂರಿನಿಂದ ಮಾರಾಟಕ್ಕೆಂದು ಮೀನು ತಂದು ಉಳಿದ ಮೀನನ್ನು ವ್ಯಾಪಾರಸ್ಥರು ಇಲ್ಲಿ ನದಿಗೆ ಎಸೆಯುತ್ತಿದ್ದಾರೆ.
ಮೀನಿನ ವೇಸ್ಟನ್ನೂ ಕೂಡ ನದಿಗೆ ಹಾಕಲಾಗುತ್ತಿದೆ.
ಬಣಕಲ್ ಪ್ರದೇಶದಲ್ಲಿ ಹೇಮಾವತಿ ನದಿ ತಟದಲ್ಲಿ ರಾಶಿ-ರಾಶಿ ಕೊಳೆತ ಮೀನು ಕಣ್ಣಿಗೆ ರಾಚುತ್ತಿದೆ. ವ್ಯಾಪಾರದ ಬಳಿಕ ಉಳಿದ ಕೊಳೆತ ಮೀನು ಹಾಗೂ ಮೀನಿನ ವೇಸ್ಟನ್ನು ಹೇಮಾವತಿ ನದಿಗೆ ಸುರಿದು ಗಾಡಿ ತೊಳೆದುಕೊಂಡು ಹೋಗುತ್ತಿದ್ದಾರೆ. ನಿತ್ಯ ಹೇಮಾವತಿ ನದಿ ದಡಕ್ಕೆ ಹತ್ತಾರು ಗೂಡ್ಸ್ ವಾಹನಗಳು ಬಂದು ಹೋಗುತ್ತವೆ.
ಹೇಮಾವತಿ ನದಿ ನೀರು ಗೊರೂರು ಡ್ಯಾಂ ಸೇರಿ ಕೆ.ಆರ್.ಎಸ್. ಮೂಲಕ ಬೆಂಗಳೂರು ತಲುಪುತ್ತದೆ.


ಹಾಸನ ಜಿಲ್ಲೆಯ ಜೀವನಾಡಿಯೇ ಹೇಮಾವತಿ ನದಿಯಾಗಿದೆ. ಮೂಡಿಗೆರೆ ತಾಲೂಕಿನ ನೂರಾರು ಹಳ್ಳಿಯ ಸಾವಿರಾರು ಎಕರೆ ಜಮೀನಿಗೆ ಇದೇ ನೀರು ಆಶ್ರಯ ನೀಡುತ್ತಿದೆ. ಈ ನೀರನ್ನು ಬಳಸಿದ್ರೆ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಅನ್ನೋದು ಸ್ಥಳಿಯರ ವಾದವಾಗಿದೆ.ಗೂಡ್ಸ್ ವಾಹನಗಳು, ಮೀನು ಮಾರಾಟಗಾರರ ಮೇಲೆ ಮೂಡಿಗೆರೆ ಜನರ ಕಿಡಿ ಕಾರಿದ್ದಾರೆ. ಗೂಡ್ಸ್ ವಾಹನಗಳ ಮಾಲೀಕರು, ಚಾಲಕರು ಹಾಗೂ ಮೀನು ಮಾರಾಟಗಾರರಿಗೆ ಮೂಡಿಗೆರೆ ಜನರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು