8:26 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಹೇಮಾವತಿ ಒಡಲಿಗೆ ವೇಸ್ಟ್ ಮೀನು ಸುರಿಯುವ ಮೀನು ವ್ಯಾಪಾರಿಗಳು: ಬಣಕಲ್ ನಲ್ಲಿ ಕೊಳೆತು ನಾರುತ್ತಿದೆ ನದಿ ತಟ; ಸಾಂಕ್ರಾಮಿಕ ರೋಗದ ಭೀತಿ

02/07/2024, 17:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಗ್ರಾಮದಲ್ಲಿ ಹೇಮಾವತಿ ನದಿ ನೀರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಗೂಡ್ಸ್ ವಾಹನಗಳಿಂದ ಹಾಗೂ ಮೀನು ವ್ಯಾಪಾರಸ್ಥರಿಂದ ನದಿ ಮಲೀನಗೊಳ್ಳುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮಂಗಳೂರಿನಿಂದ ಮಾರಾಟಕ್ಕೆಂದು ಮೀನು ತಂದು ಉಳಿದ ಮೀನನ್ನು ವ್ಯಾಪಾರಸ್ಥರು ಇಲ್ಲಿ ನದಿಗೆ ಎಸೆಯುತ್ತಿದ್ದಾರೆ.
ಮೀನಿನ ವೇಸ್ಟನ್ನೂ ಕೂಡ ನದಿಗೆ ಹಾಕಲಾಗುತ್ತಿದೆ.
ಬಣಕಲ್ ಪ್ರದೇಶದಲ್ಲಿ ಹೇಮಾವತಿ ನದಿ ತಟದಲ್ಲಿ ರಾಶಿ-ರಾಶಿ ಕೊಳೆತ ಮೀನು ಕಣ್ಣಿಗೆ ರಾಚುತ್ತಿದೆ. ವ್ಯಾಪಾರದ ಬಳಿಕ ಉಳಿದ ಕೊಳೆತ ಮೀನು ಹಾಗೂ ಮೀನಿನ ವೇಸ್ಟನ್ನು ಹೇಮಾವತಿ ನದಿಗೆ ಸುರಿದು ಗಾಡಿ ತೊಳೆದುಕೊಂಡು ಹೋಗುತ್ತಿದ್ದಾರೆ. ನಿತ್ಯ ಹೇಮಾವತಿ ನದಿ ದಡಕ್ಕೆ ಹತ್ತಾರು ಗೂಡ್ಸ್ ವಾಹನಗಳು ಬಂದು ಹೋಗುತ್ತವೆ.
ಹೇಮಾವತಿ ನದಿ ನೀರು ಗೊರೂರು ಡ್ಯಾಂ ಸೇರಿ ಕೆ.ಆರ್.ಎಸ್. ಮೂಲಕ ಬೆಂಗಳೂರು ತಲುಪುತ್ತದೆ.


ಹಾಸನ ಜಿಲ್ಲೆಯ ಜೀವನಾಡಿಯೇ ಹೇಮಾವತಿ ನದಿಯಾಗಿದೆ. ಮೂಡಿಗೆರೆ ತಾಲೂಕಿನ ನೂರಾರು ಹಳ್ಳಿಯ ಸಾವಿರಾರು ಎಕರೆ ಜಮೀನಿಗೆ ಇದೇ ನೀರು ಆಶ್ರಯ ನೀಡುತ್ತಿದೆ. ಈ ನೀರನ್ನು ಬಳಸಿದ್ರೆ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಅನ್ನೋದು ಸ್ಥಳಿಯರ ವಾದವಾಗಿದೆ.ಗೂಡ್ಸ್ ವಾಹನಗಳು, ಮೀನು ಮಾರಾಟಗಾರರ ಮೇಲೆ ಮೂಡಿಗೆರೆ ಜನರ ಕಿಡಿ ಕಾರಿದ್ದಾರೆ. ಗೂಡ್ಸ್ ವಾಹನಗಳ ಮಾಲೀಕರು, ಚಾಲಕರು ಹಾಗೂ ಮೀನು ಮಾರಾಟಗಾರರಿಗೆ ಮೂಡಿಗೆರೆ ಜನರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು