5:13 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಹೇಮಾವತಿ ಒಡಲಿಗೆ ವೇಸ್ಟ್ ಮೀನು ಸುರಿಯುವ ಮೀನು ವ್ಯಾಪಾರಿಗಳು: ಬಣಕಲ್ ನಲ್ಲಿ ಕೊಳೆತು ನಾರುತ್ತಿದೆ ನದಿ ತಟ; ಸಾಂಕ್ರಾಮಿಕ ರೋಗದ ಭೀತಿ

02/07/2024, 17:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಗ್ರಾಮದಲ್ಲಿ ಹೇಮಾವತಿ ನದಿ ನೀರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಗೂಡ್ಸ್ ವಾಹನಗಳಿಂದ ಹಾಗೂ ಮೀನು ವ್ಯಾಪಾರಸ್ಥರಿಂದ ನದಿ ಮಲೀನಗೊಳ್ಳುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮಂಗಳೂರಿನಿಂದ ಮಾರಾಟಕ್ಕೆಂದು ಮೀನು ತಂದು ಉಳಿದ ಮೀನನ್ನು ವ್ಯಾಪಾರಸ್ಥರು ಇಲ್ಲಿ ನದಿಗೆ ಎಸೆಯುತ್ತಿದ್ದಾರೆ.
ಮೀನಿನ ವೇಸ್ಟನ್ನೂ ಕೂಡ ನದಿಗೆ ಹಾಕಲಾಗುತ್ತಿದೆ.
ಬಣಕಲ್ ಪ್ರದೇಶದಲ್ಲಿ ಹೇಮಾವತಿ ನದಿ ತಟದಲ್ಲಿ ರಾಶಿ-ರಾಶಿ ಕೊಳೆತ ಮೀನು ಕಣ್ಣಿಗೆ ರಾಚುತ್ತಿದೆ. ವ್ಯಾಪಾರದ ಬಳಿಕ ಉಳಿದ ಕೊಳೆತ ಮೀನು ಹಾಗೂ ಮೀನಿನ ವೇಸ್ಟನ್ನು ಹೇಮಾವತಿ ನದಿಗೆ ಸುರಿದು ಗಾಡಿ ತೊಳೆದುಕೊಂಡು ಹೋಗುತ್ತಿದ್ದಾರೆ. ನಿತ್ಯ ಹೇಮಾವತಿ ನದಿ ದಡಕ್ಕೆ ಹತ್ತಾರು ಗೂಡ್ಸ್ ವಾಹನಗಳು ಬಂದು ಹೋಗುತ್ತವೆ.
ಹೇಮಾವತಿ ನದಿ ನೀರು ಗೊರೂರು ಡ್ಯಾಂ ಸೇರಿ ಕೆ.ಆರ್.ಎಸ್. ಮೂಲಕ ಬೆಂಗಳೂರು ತಲುಪುತ್ತದೆ.


ಹಾಸನ ಜಿಲ್ಲೆಯ ಜೀವನಾಡಿಯೇ ಹೇಮಾವತಿ ನದಿಯಾಗಿದೆ. ಮೂಡಿಗೆರೆ ತಾಲೂಕಿನ ನೂರಾರು ಹಳ್ಳಿಯ ಸಾವಿರಾರು ಎಕರೆ ಜಮೀನಿಗೆ ಇದೇ ನೀರು ಆಶ್ರಯ ನೀಡುತ್ತಿದೆ. ಈ ನೀರನ್ನು ಬಳಸಿದ್ರೆ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಅನ್ನೋದು ಸ್ಥಳಿಯರ ವಾದವಾಗಿದೆ.ಗೂಡ್ಸ್ ವಾಹನಗಳು, ಮೀನು ಮಾರಾಟಗಾರರ ಮೇಲೆ ಮೂಡಿಗೆರೆ ಜನರ ಕಿಡಿ ಕಾರಿದ್ದಾರೆ. ಗೂಡ್ಸ್ ವಾಹನಗಳ ಮಾಲೀಕರು, ಚಾಲಕರು ಹಾಗೂ ಮೀನು ಮಾರಾಟಗಾರರಿಗೆ ಮೂಡಿಗೆರೆ ಜನರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು