11:42 AM Saturday21 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಹೆಣ ಊಳುವ ವಿಚಾರ: ಕಾಫಿನಾಡಲ್ಲಿ ಎರಡು ಜಾತಿಗಳ ಮಧ್ಯ ವಾರ್; ಶವ ಊಳುವ ಗುಂಡಿಗೆ ಇಳಿದು ಗ್ರಾಪಂ ಮಾಜಿ ಅಧ್ಯಕ್ಷೆ ಪ್ರತಿಭಟನೆ

06/12/2024, 22:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಣ ಊಳುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಜಾತಿಗಳ ಮಧ್ಯ ಗಲಾಟೆ ನಡೆದಿದ್ದು, ಶವ ಊಳುವ ಗುಂಡಿಗೆ ಇಳಿದು
ಮಹಿಳೆಯೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹಲವು ದಶಕಗಳಿಂದ ಜಾಗದ ವಿವಾದ ಬೂದಿ ಮುಚ್ಚಿದ ಕೆಂಡದಂತಿತ್ತು. ಇಂದು ವಿವಾದಿತ ಜಾಗ ನಮ್ಮದೆಂದು ಶವ ಊಳುಲು ಹೋದ ಒಂದು ನಿರ್ದಿಷ್ಟ ಜಾತಿಗೆ ಇನ್ನೊಂದು ಜಾತಿ ಸಮುದಾಯದಿಂದ ತೀವ್ರ‌ ವಿರೋಧ ವ್ಯಕ್ತವಾಯಿತು.


ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಹೆಣ ಊಳುವುದನ್ನು ವಿರೋಧಿಸಿತು.ಗುಂಡಿಗೆ ಇಳಿದು ಶವ ಊಳಲು ಒಂದು ಸಮುದಾಯದ ಮಹಿಳೆ ವಿರೋಧ ವ್ಯಕ್ತಪಡಿಸಿದರು. ಇವರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೂ ಆಗಿದ್ದಾರೆ. ಮಾಜಿ ಅಧ್ಯಕ್ಷತೆಯ ಜತೆ ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಂತರ ಆಲ್ದೂರು
ಪೊಲೀಸರು ಎಲ್ಲರನ್ನು ಎಳೆದು ಮೇಲೆ ಹಾಕಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಸಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು