3:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಹೆಣ್ಮಕ್ಕಳ ಮೇಲಿನ ಅತ್ಯಾಚಾರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕು: ಪ್ರತಿಭಾ ಕುಳಾಯಿ

25/11/2021, 12:42

ಮಂಗಳೂರು(reporterkarnataka.com):

ನಾವು ಸುಮ್ಮನೆ ಇದ್ರೆ ಪ್ರಕರಣಗಳು ಮುಚ್ಚಿ ಹೋಗುತ್ತವೆ. ಎಲ್ಲಾ ಸಂಘಟನೆಗಳು ರಾಜಕೀಯ ಬಿಟ್ಟು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುರುಳರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡಲು ಹೋರಾಡಬೇಕು ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಪ್ರತಿಭಾ ಕುಳಾಯಿ ಹೇಳಿದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕೋಮು ವಿಚಾರದಲ್ಲಿ ಎಲ್ಲಾ ಸಂಘಟನೆಗಳು ಮಾತಾಡುತ್ತವೆ. ಆದರೆ ಮಹಿಳೆಯರ ಮೇಲಿನ ಅತ್ಯಾಚಾರದ ಬಗ್ಗೆ ಯಾರೂ ಮಾತಾಡುವುದಿಲ್ಲ, ಈ ವಿಕೃತರಿಗೆ ಕಠಿಣದಿಂದ ಕಠಿಣ ಶಿಕ್ಷೆ ಸಿಗುವಂತೆ ಮಾಡಬೇಕಿದೆ ಎಂದರು.

ಈ ರೀತಿಯ ಅನೇಕ ಪ್ರಕರಣಗಳು ಮುಚ್ಚಿ ಹೋಗುತ್ತಿವೆ. ಹಾಗೆ ಆಗಲು ಬಿಡಬಾರದು. ಹಾಗೆಯೆ ಹೊರರಾಜ್ಯದಿಂದ ಬರುವವರ ಮೇಲೆ ಪೋಲಿಸರು ನಿಗಾ ಇಡಬೇಕು. ಜಿಲ್ಲಾ ಪೋಲಿಸರು ನ್ಯಾಯ ದೊರಕಿಸಿ ಕೊಡುವಲ್ಲಿ ಹೆಚ್ಚಿನ ಪ್ರಯತ್ನ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು