12:39 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹೆಣ್ಣು ಮಗು ಕರುಣಿಸಿದ ಖುಷಿ: ಕಟೀಲಪ್ಪೆಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಟ್ಟೆಸೀರೆ ಸಮರ್ಪಣೆ

22/04/2023, 23:42

ಕಟೀಲು(reporterkarnataka.com): ಬಯಕೆ ಈಡೇರಿದೆ. ಆಕೆ ಅಂದುಕೊಂಡಂತೆ ಹೆಣ್ಣು ಮಗು ಹುಟ್ಡಿದೆ. ತಾಯಿ ಫುಲ್ ಖುಷಿಗೊಂಡಿದ್ದಾರೆ. ತಾನು ಹೊತ್ತ ಹರಕೆಯಂತೆ ಕರಾವಳಿಯ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕಟೀಲು ದುರ್ಗಾಪರಮೇಶ್ವರಿಯ ಸನ್ನಿಧಿಗೆ ಬಂದ ಆ ಮಹಾ ತಾಯಿ ಹರಕೆಯೊಪ್ಪಿಸಿದ್ದಾರೆ.
ಈ ಮಹಾ ತಾಯಿ ಬೇರೆ ಯಾರೂ ಅಲ್ಲ, ತುಳುನಾಡು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತಿದ್ದ ಶಿಲ್ಪಾ ಶೆಟ್ಟಿ ಹೆಣ್ಣು ಮಗು ಜನಿಸಿದರೆ ಕಟೀಲು ದುರ್ಗಾ ಪರಮೇಶ್ವರಿಗೆ ಪಟ್ಟೆ ಸೀರೆಯನ್ನು ಕಾಣಿಕೆ ರೂಪದಲ್ಲಿ ನೀಡೋದಾಗಿ ಹರಕೆ ಹೊತ್ತಿದ್ದರಂತೆ. ಅದೇ ರೀತಿ ಇಂದು ಬಂದು ತಮ್ಮ ಹರಕೆಯನ್ನು ತೀರಿಸಿದ್ದಾರೆ.
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಅವರು ಪತಿ ರಾಜ್ ಕುಂದ್ರಾ. ಮಕ್ಕಳಾದ ವಿಯಾನ್, ಸಮಿಷಾ, ಸಹೋದರಿ ನಟಿ ಶಮಿತಾ ಶೆಟ್ಟಿ. ಶಿಲ್ಪಾ ಶೆಟ್ಟಿಯವರ ತಾಯಿ ಭೇಟಿ ನೀಡಿ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೊಕ್ತೇಸರ ವಾಸುದೇವ ಆಸ್ರಣ್ಣ ಪ್ರಸಾದ ನೀಡಿದರು. ಅರ್ಚಕರಾದ ಅನಂತ ಆಸ್ರಣ್ಣ ಶ್ರೀಹರಿ ಆಸ್ರಣ್ಣ ವಕೀಲ ರವಿ ಪೂಜಾರಿ ಉಪಸ್ಥಿತರಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಗುಲದ ನಾಗಸ್ವರ ವಾದಕರಾದ ಲಿಂಗಪ್ಪ ಸೇರಿಗಾರರ ವಾದ್ಯವಾದನವನ್ನು ಆಲಿಸಿದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಕಟೀಲು ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಕೆಲಹೊತ್ತು ವೀಕ್ಷಿಸಿ, ವೇಷಗಳ ಪೋಟೋ ತೆಗೆದು ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು