8:56 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ 

02/12/2021, 21:51

ಮೈಸೂರು(reporterkarnataka.com:

ಪೋಷಕರು ಮದುವೆ ಮಾಡಿಸದ ಬೇಸರದಿಂದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರೇಮಿಗಳಾದ ಬಿ.ಜಿ.ಸತೀಶ್ (21) ಬಿ.ಜಿ.ವರಲಕ್ಷ್ಮಿ (20) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. 

ಸತೀಶ್ ಹಾಗೂ ವರಲಕ್ಷ್ಮೀ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ಸರ್ಕಾರಿ ಕೆಲಸದ ನಂತರ ಮದುವೆ ಮಾಡುವುದಾಗಿ ಹುಡುಗಿ ಮನೆಯವರು ಹೇಳಿದ್ದರು. ಬಿಎ ಓದಿದ್ದ ಯುವಕ ಪೊಲೀಸ್ ಕೆಲಸಕ್ಕೆ ಸೇರುವ ಯತ್ನ ಮಾಡುತ್ತಿದ್ದನು. ಯುವತಿ ನರ್ಸಿಂಗ್ ಓದುತ್ತಿದ್ದಳು.

ಕೆಲಸ ಸಿಕ್ಕ ನಂತರ ಮದುವೆ ಮಾಡುವುದಾಗಿ ಹುಡುಗಿ ತಂದೆ ಸಿದ್ದಲಿಂಗ ನಾಯ್ಕ ತಾಕೀತು ಮಾಡಿದ್ದರು. ಪೋಷಕರ ನಡೆಗೆ ಬೇಸೆತ್ತು ಮೈಸೂರಿಗೆ ಆಗಮಿಸಿದ್ದ ಪ್ರೇಮಿಗಳು ಮಂಗಳವಾರ ನಗರದಲ್ಲಿರುವ ಸಂಜೆ ಲಾಡ್ಜ್ವೊಂದರಲ್ಲಿ ರೂಂ ತೆಗೆದುಕೊಂಡಿದ್ದರು. ರಾತ್ರಿಯೂ ಹೊರ ಬಂದಿರಲಿಲ್ಲ. ಬೆಳಿಗ್ಗೆಯೂ ಹೊರ ಬಾರದ ಹಿನ್ನಲೆ, ರೂಮ್ ಬಳಿ ತೆರಳಿ ನೋಡಿದಾಗ ಇಬ್ಬರೂ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಕುರಿತು ಲಾಡ್ಜ್ ಮಾಲೀಕ ಲಷ್ಕರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಲಷ್ಕರ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು