3:06 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ 

02/12/2021, 21:51

ಮೈಸೂರು(reporterkarnataka.com:

ಪೋಷಕರು ಮದುವೆ ಮಾಡಿಸದ ಬೇಸರದಿಂದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರೇಮಿಗಳಾದ ಬಿ.ಜಿ.ಸತೀಶ್ (21) ಬಿ.ಜಿ.ವರಲಕ್ಷ್ಮಿ (20) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. 

ಸತೀಶ್ ಹಾಗೂ ವರಲಕ್ಷ್ಮೀ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ಸರ್ಕಾರಿ ಕೆಲಸದ ನಂತರ ಮದುವೆ ಮಾಡುವುದಾಗಿ ಹುಡುಗಿ ಮನೆಯವರು ಹೇಳಿದ್ದರು. ಬಿಎ ಓದಿದ್ದ ಯುವಕ ಪೊಲೀಸ್ ಕೆಲಸಕ್ಕೆ ಸೇರುವ ಯತ್ನ ಮಾಡುತ್ತಿದ್ದನು. ಯುವತಿ ನರ್ಸಿಂಗ್ ಓದುತ್ತಿದ್ದಳು.

ಕೆಲಸ ಸಿಕ್ಕ ನಂತರ ಮದುವೆ ಮಾಡುವುದಾಗಿ ಹುಡುಗಿ ತಂದೆ ಸಿದ್ದಲಿಂಗ ನಾಯ್ಕ ತಾಕೀತು ಮಾಡಿದ್ದರು. ಪೋಷಕರ ನಡೆಗೆ ಬೇಸೆತ್ತು ಮೈಸೂರಿಗೆ ಆಗಮಿಸಿದ್ದ ಪ್ರೇಮಿಗಳು ಮಂಗಳವಾರ ನಗರದಲ್ಲಿರುವ ಸಂಜೆ ಲಾಡ್ಜ್ವೊಂದರಲ್ಲಿ ರೂಂ ತೆಗೆದುಕೊಂಡಿದ್ದರು. ರಾತ್ರಿಯೂ ಹೊರ ಬಂದಿರಲಿಲ್ಲ. ಬೆಳಿಗ್ಗೆಯೂ ಹೊರ ಬಾರದ ಹಿನ್ನಲೆ, ರೂಮ್ ಬಳಿ ತೆರಳಿ ನೋಡಿದಾಗ ಇಬ್ಬರೂ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಕುರಿತು ಲಾಡ್ಜ್ ಮಾಲೀಕ ಲಷ್ಕರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಲಷ್ಕರ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು