11:54 PM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ 

02/12/2021, 21:51

ಮೈಸೂರು(reporterkarnataka.com:

ಪೋಷಕರು ಮದುವೆ ಮಾಡಿಸದ ಬೇಸರದಿಂದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರೇಮಿಗಳಾದ ಬಿ.ಜಿ.ಸತೀಶ್ (21) ಬಿ.ಜಿ.ವರಲಕ್ಷ್ಮಿ (20) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. 

ಸತೀಶ್ ಹಾಗೂ ವರಲಕ್ಷ್ಮೀ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ಸರ್ಕಾರಿ ಕೆಲಸದ ನಂತರ ಮದುವೆ ಮಾಡುವುದಾಗಿ ಹುಡುಗಿ ಮನೆಯವರು ಹೇಳಿದ್ದರು. ಬಿಎ ಓದಿದ್ದ ಯುವಕ ಪೊಲೀಸ್ ಕೆಲಸಕ್ಕೆ ಸೇರುವ ಯತ್ನ ಮಾಡುತ್ತಿದ್ದನು. ಯುವತಿ ನರ್ಸಿಂಗ್ ಓದುತ್ತಿದ್ದಳು.

ಕೆಲಸ ಸಿಕ್ಕ ನಂತರ ಮದುವೆ ಮಾಡುವುದಾಗಿ ಹುಡುಗಿ ತಂದೆ ಸಿದ್ದಲಿಂಗ ನಾಯ್ಕ ತಾಕೀತು ಮಾಡಿದ್ದರು. ಪೋಷಕರ ನಡೆಗೆ ಬೇಸೆತ್ತು ಮೈಸೂರಿಗೆ ಆಗಮಿಸಿದ್ದ ಪ್ರೇಮಿಗಳು ಮಂಗಳವಾರ ನಗರದಲ್ಲಿರುವ ಸಂಜೆ ಲಾಡ್ಜ್ವೊಂದರಲ್ಲಿ ರೂಂ ತೆಗೆದುಕೊಂಡಿದ್ದರು. ರಾತ್ರಿಯೂ ಹೊರ ಬಂದಿರಲಿಲ್ಲ. ಬೆಳಿಗ್ಗೆಯೂ ಹೊರ ಬಾರದ ಹಿನ್ನಲೆ, ರೂಮ್ ಬಳಿ ತೆರಳಿ ನೋಡಿದಾಗ ಇಬ್ಬರೂ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಕುರಿತು ಲಾಡ್ಜ್ ಮಾಲೀಕ ಲಷ್ಕರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಲಷ್ಕರ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು