1:57 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ 

02/12/2021, 21:51

ಮೈಸೂರು(reporterkarnataka.com:

ಪೋಷಕರು ಮದುವೆ ಮಾಡಿಸದ ಬೇಸರದಿಂದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರೇಮಿಗಳಾದ ಬಿ.ಜಿ.ಸತೀಶ್ (21) ಬಿ.ಜಿ.ವರಲಕ್ಷ್ಮಿ (20) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. 

ಸತೀಶ್ ಹಾಗೂ ವರಲಕ್ಷ್ಮೀ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ಸರ್ಕಾರಿ ಕೆಲಸದ ನಂತರ ಮದುವೆ ಮಾಡುವುದಾಗಿ ಹುಡುಗಿ ಮನೆಯವರು ಹೇಳಿದ್ದರು. ಬಿಎ ಓದಿದ್ದ ಯುವಕ ಪೊಲೀಸ್ ಕೆಲಸಕ್ಕೆ ಸೇರುವ ಯತ್ನ ಮಾಡುತ್ತಿದ್ದನು. ಯುವತಿ ನರ್ಸಿಂಗ್ ಓದುತ್ತಿದ್ದಳು.

ಕೆಲಸ ಸಿಕ್ಕ ನಂತರ ಮದುವೆ ಮಾಡುವುದಾಗಿ ಹುಡುಗಿ ತಂದೆ ಸಿದ್ದಲಿಂಗ ನಾಯ್ಕ ತಾಕೀತು ಮಾಡಿದ್ದರು. ಪೋಷಕರ ನಡೆಗೆ ಬೇಸೆತ್ತು ಮೈಸೂರಿಗೆ ಆಗಮಿಸಿದ್ದ ಪ್ರೇಮಿಗಳು ಮಂಗಳವಾರ ನಗರದಲ್ಲಿರುವ ಸಂಜೆ ಲಾಡ್ಜ್ವೊಂದರಲ್ಲಿ ರೂಂ ತೆಗೆದುಕೊಂಡಿದ್ದರು. ರಾತ್ರಿಯೂ ಹೊರ ಬಂದಿರಲಿಲ್ಲ. ಬೆಳಿಗ್ಗೆಯೂ ಹೊರ ಬಾರದ ಹಿನ್ನಲೆ, ರೂಮ್ ಬಳಿ ತೆರಳಿ ನೋಡಿದಾಗ ಇಬ್ಬರೂ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಕುರಿತು ಲಾಡ್ಜ್ ಮಾಲೀಕ ಲಷ್ಕರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಲಷ್ಕರ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು