11:38 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಾಮಪತ್ರ ಸಲ್ಲಿಕೆ; ಭಾರಿ ಜನಸ್ತೋಮದೊಂದಿಗೆ ಪಾದಯಾತ್ರೆಯಲ್ಲಿ ಆಗಮನ

20/04/2023, 12:21

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಗುರುವಾರ ಭಾರಿ ಸಂಖ್ಯೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಇದಕ್ಕೆ ಮುನ್ನ ಅಭ್ಯರ್ಥಿಯಾದ
ಜೆ.ಆರ್. ಲೋಬೊ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹಾಗೂ ಪಕ್ಷದ ಮುಖಂಡರು ಬೆಳಗ್ಗೆ ನಗರದ ವಿವಿಧ ದೇವಾಲಯಗಳು, ಚರ್ಚ್, ಮಸೀದಿಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ
ಕುದ್ರೋಳಿ ಶ್ರೀ ಗೋಕರ್ಣನಾಥ ಕೇತ್ರದಲ್ಲಿ ಪೂಜೆ ಸಲ್ಲಿಸಿ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳ ಜತೆಗೆ ಪಾದಯಾತ್ರೆಯಲ್ಲಿ ಮಣ್ಣಗುಡ್ಡೆ ಮಂಗಳಾಸ್ಟೇಡಿಯಂ ಬಳಿ ಆಗಮಿಸಿದರು. ಅಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಬಳಿಕ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿರುವ
ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಪಕ್ಷದ ಹಿರಿಯ ಮುಖಂಡ ಕಳ್ಳಿಗೆ ತಾರನಾಥ ಶೆಟ್ಟಿ, ಎಂ.ಶಶಿಧರ ಹೆಗ್ಡೆ, ಪ್ರಕಾಶ್ ಸಾಲಿಯಾನ್, ಅಬ್ದುಲ್ ಸಲೀಂ.,ಟಿ.ಕೆ.ಸುಧೀರ್, ಸಬಿತಾ ಮಿಸ್ಕಿತ್, ಮೋಹನ್ ಶೆಟ್ಟಿ, ಅಲೆಸ್ಟರ್ ಡಿಕುನ್ನಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು