4:14 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ, ಪರ್ಯಾಯ ನಾಯಕ ಇಲ್ಲ ಎನ್ನುವುದನ್ನು ಒಪ್ಪೊಲ್ಲ: ಸಿಎಂ ಯಡಿಯೂರಪ್ಪ 

06/06/2021, 13:06

ಬೆಂಗಳೂರು(reporterkarnataka news): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿದೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ತನಗೆ ಪರ್ಯಾಯ ನಾಯಕನಿಲ್ಲ ಎಂಬ ವಿಷಯವನ್ನು ಒಪ್ಪುವುದಿಲ್ಲ. ರಾಜ್ಯದಲ್ಲಿ, ದೇಶದಲ್ಲಿ ಪರ್ಯಾಯ ನಾಯಕರು ಇದ್ದೇ ಇರುತ್ತಾರೆ. ಬಿಜೆಪಿ ಹೈಕಮಾಂಡ್ ಎಷ್ಟು ದಿನ ನನ್ನ ಮೇಲೆ ವಿಶ್ವಾಸ ಇಟ್ಟಿರುತ್ತದೆಯೇ ಅಲ್ಲಿಯವರೆಗೆ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ. ರಾಜೀನಾಮೆ ಕೇಳಿದರೆ ಅಧಿಕಾರದಿಂದ ಕೆಳಗಿಳಿಯುತ್ತೇನೆ ಎಂದು ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ ಹೇಳಿದರು.

ಯಡಿಯೂರಪ್ಪ ಅಧಿಕಾರಕ್ಕೆ ಏರಿದಾಗಿನಿಂದ ಅವರನ್ನು ಕೆಳಗಿಳಿಸುವ ಪ್ರಯತ್ನ ಪಕ್ಷದೊಳಗೆ ನಡೆಯುತ್ತಿದೆ. ಅದು ಈಗ ಕೂಡ ಚಾಲ್ತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು