1:05 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಗುರಿಯಾಗಿಸಿದ್ದ ನಿರ್ಬಂಧ ಆದೇಶಕ್ಕೆ ಹೈಕೋರ್ಟ್‌ ಧಾರವಾಡ ಪೀಠ ತಾತ್ಕಾಲಿಕ ತಡೆ: ಕೇಂದ್ರ ಸಚಿವ ಜೋಶಿ ಫುಲ್ ಖುಷ್

28/10/2025, 18:41

ನವದೆಹಲಿ(reporterkarnataka.com): ಆರೆಸ್ಸೆಸ್‌ ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಟಿ ಬೀಸಿದ್ದಾರೆ.
ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್‌ ಸರ್ಕಾರ ‎ಪೂರ್ವಾಗ್ರಹಪೀಡಿತವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿಕೊಂಡು ಸರ್ಕಾರದ ಆಸ್ತಿ ನೆಪದಲ್ಲಿ ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರೇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಜೋಶಿ ಖಂಡಿಸಿದರು.
ರಾಜ್ಯ ಕಾಂಗ್ರೆಸ್‌ ಸರ್ಕಾರ ಸಂವಿಧಾನದ ಮೂಲ ಆಶಯಗಳ ವಿರೋಧವಾಗಿ ನಡೆಯುತ್ತಿದೆ ಎಂಬುದಕ್ಕೆ ಹೈಕೋರ್ಟ್‌ ಪೀಠ ನೀಡಿದ ಈ ಮಹತ್ವದ ತೀರ್ಪೇ ಸಾಕ್ಷಿ ಎಂದ ಸಚಿವರು, ‎ಸಂವಿಧಾನ ವಿರೋಧಿ ಕ್ರಮಗಳನ್ನು ಅನುಸರಿಸುವ ಸರ್ಕಾರಕ್ಕೆ ನ್ಯಾಯಾಲಯದ ಈ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ. ಈ ಸರ್ಕಾರ ಇನ್ನಾದರೂ ‎ಸಂವಿಧಾನದ ಮೂಲ ಆಶಯ ಗೌರವಿಸುವ ಕಾರ್ಯವನ್ನು ಪಾಲಿಸಲಿ ಸಲಹೆ ನೀಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನೇ ಗುರಿಯಾಗಿಸಿಕೊಂಡು ಹೊರಡಿಸಿದ್ದ ಈ ಆದೇಶದ ಹಿಂದಿನ ಪಿತೂರಿಗೆ ನ್ಯಾಯಾಲಯ ತಡೆವೊಡ್ಡಿದಂತಾಗಿದೆ. ಅಲ್ಲದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಪಾಠವನ್ನು ಸರ್ಕಾರಕ್ಕೆ ಮಾಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು