7:30 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಗುರಿಯಾಗಿಸಿದ್ದ ನಿರ್ಬಂಧ ಆದೇಶಕ್ಕೆ ಹೈಕೋರ್ಟ್‌ ಧಾರವಾಡ ಪೀಠ ತಾತ್ಕಾಲಿಕ ತಡೆ: ಕೇಂದ್ರ ಸಚಿವ ಜೋಶಿ ಫುಲ್ ಖುಷ್

28/10/2025, 18:41

ನವದೆಹಲಿ(reporterkarnataka.com): ಆರೆಸ್ಸೆಸ್‌ ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಟಿ ಬೀಸಿದ್ದಾರೆ.
ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್‌ ಸರ್ಕಾರ ‎ಪೂರ್ವಾಗ್ರಹಪೀಡಿತವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿಕೊಂಡು ಸರ್ಕಾರದ ಆಸ್ತಿ ನೆಪದಲ್ಲಿ ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರೇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಜೋಶಿ ಖಂಡಿಸಿದರು.
ರಾಜ್ಯ ಕಾಂಗ್ರೆಸ್‌ ಸರ್ಕಾರ ಸಂವಿಧಾನದ ಮೂಲ ಆಶಯಗಳ ವಿರೋಧವಾಗಿ ನಡೆಯುತ್ತಿದೆ ಎಂಬುದಕ್ಕೆ ಹೈಕೋರ್ಟ್‌ ಪೀಠ ನೀಡಿದ ಈ ಮಹತ್ವದ ತೀರ್ಪೇ ಸಾಕ್ಷಿ ಎಂದ ಸಚಿವರು, ‎ಸಂವಿಧಾನ ವಿರೋಧಿ ಕ್ರಮಗಳನ್ನು ಅನುಸರಿಸುವ ಸರ್ಕಾರಕ್ಕೆ ನ್ಯಾಯಾಲಯದ ಈ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ. ಈ ಸರ್ಕಾರ ಇನ್ನಾದರೂ ‎ಸಂವಿಧಾನದ ಮೂಲ ಆಶಯ ಗೌರವಿಸುವ ಕಾರ್ಯವನ್ನು ಪಾಲಿಸಲಿ ಸಲಹೆ ನೀಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನೇ ಗುರಿಯಾಗಿಸಿಕೊಂಡು ಹೊರಡಿಸಿದ್ದ ಈ ಆದೇಶದ ಹಿಂದಿನ ಪಿತೂರಿಗೆ ನ್ಯಾಯಾಲಯ ತಡೆವೊಡ್ಡಿದಂತಾಗಿದೆ. ಅಲ್ಲದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಪಾಠವನ್ನು ಸರ್ಕಾರಕ್ಕೆ ಮಾಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು