3:29 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಹೈಕೋರ್ಟ್‌ನಿಂದ ಸ್ವಯಂ ಪ್ರೇರಣೆಯ ಪ್ರಕರಣ, ರಾಜ್ಯ ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

17/06/2025, 18:20

ಬೆಂಗಳೂರು(reporterkarnataka.com):ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್‌ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್‌ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದರು.
ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್‌ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028 ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್‌ ಬಹಳ ಚಿಂತೆಯಲ್ಲಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು