12:49 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಹೈ ಮಾಸ್ಕ್ ದೀಪ ಖರೀದಿಯಲ್ಲಿ ತಾಪಂ ಇಒ ಭಾರಿ ಅವ್ಯವಹಾರ: 3 ಪಟ್ಟು ಜಾಸ್ತಿ ತೆತ್ತು ಖರೀದಿ ಆರೋಪ

01/08/2021, 08:20

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹೈ ಮಾಸ್ಕ್ ಖರೀದಿಯಲ್ಲಿ ಅವ್ಯವಹಾರ ಮಾಡಿದ್ದು ಸಂಬಂಧಪಟ್ಟ ದಾಖಲೆ ನೀಡಲು ಮೀನಮೇಷ ಮಾಡುತ್ತಿದ್ದಾರೆ. ಕೂಡಲೇ ತನಿಖೆ ಮಾಡಬೇಕೆಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ

ಎನ್. ಜೆ  ರಾಜೇಶ್ ಆರೋಪಿಸಿದ್ದಾರೆ.

ನಾಗಮಂಗಲದ ಕಾರ್ಯನಿರತ ಸಂಘದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ನಾಗಮಂಗಲ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು  ಹೈ ಮಾಸ್ಕ್ ಖರೀದಿಯಲ್ಲಿ ಮೂರು ಪಟ್ಟು ಬೆಲೆ ನಮೂದಿಸಿ ಖರೀದಿ ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಮಾಹಿತಿ ಕೇಳಿದರೆ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಅನುಮಾನಾಸ್ಪದವಾಗಿದೆ ಎಂದು ಹೇಳಿದರು.

2020 -21 ನೇ ಸಾಲಿನ ಹೆಚ್ಚುವರಿ ಸಂಯುಕ್ತ ಅನುದಾನ 32.25 ಲಕ್ಷದ ಯೋಜನೆಯಲ್ಲಿ ಖರೀದಿ ಇತರೆ ಯೋಜನೆಗಳಲ್ಲಿಯೂ ಮಾಡಿರುವ ಹೈ ಮಾಸ್ಕ್ ದೀಪಗಳು ಅವ್ಯವಹಾರವಾಗಿದೆ ಹಾಗೂ ದೀಪ ಖರೀದಿ ಮಾಡಿ ಸಂಬಂಧಪಟ್ಟ ಪಂಚಾಯಿತಿಗಳಿಗೆ ಹಸ್ತಾಂತರ  ಮಾಡಬೇಕಾಗಿದ್ದು ಆದರೆ ಯಾವುದೇ ದಾಖಲೆಗಳು ನೀಡಿಲ್ಲವೆಂದು ತಿಳಿದು ಬಂದಿದೆ ಕೂಡಲೇ ಯೋಜನೆಯ ಬಗ್ಗೆ ಪೂರ್ಣ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತುಪ್ಪದ ಮಡ ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು