1:21 PM Monday28 - July 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ…

ಇತ್ತೀಚಿನ ಸುದ್ದಿ

ಹೈ ಪ್ರೊಫೈಲ್ ಸೆಕ್ಸ್ ಹಗರಣ: ಬೆಂಗಳೂರಿನ ಯುವತಿ ಸಹಿತ 11 ಮಂದಿ ಅರೆಸ್ಟ್: ರಾಜಕಾರಣಿಗಳು ಭಾಗಿ?

25/07/2022, 19:49

ಬೆಂಗಳೂರು(reporterkarnataka.com):

ಛತ್ತೀಸಗಢದ ರಾಯ್ಪುರದ ಸ್ಟಾರ್​ ಹೋಟೆಲ್​ ನಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳ ಯುವತಿಯರನ್ನು ಇಟ್ಟುಕೊಂಡು ನಡೆಸುತ್ತಿದ್ದ ಭಾರೀ ದಂಧೆ ಬೆಳಕಿಗೆ ಬಂದಿದೆ.

ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕದ ಸಿಬ್ಬಂದಿ ಹೈ ಪ್ರೊಫೈಲ್​ ವೇಶ್ಯಾವಾಟಿಕೆ ನಡೆಸುತ್ತಿರುವುದನ್ನು ಬಯಲಿಗೆ ಎಳೆದಿದ್ದಾರೆ.

ಈ ಘಟನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಯುವತಿ ಸೇರಿದಂತೆ 11 ಮಂದಿ ಯುವತಿಯರು ಹಾಗೂ ಒಬ್ಬ ಕಿಂಗ್​ಪಿನ್​ನನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಯುವತಿ ಹೊರತುಪಡಿಸಿ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮೂಲದವರು ಎಂದು ತಿಳಿದು ಬಂದಿದೆ.

ಇನ್ನು ಇವರ ಸ್ಮಾರ್ಟ್​ಫೋನ್​ಗಳನ್ನು ತನಿಖೆಗೆ ಒಳಪಡಿಸಿದಾಗ ಬೆಂಗಳೂರಿನ ಯುವತಿ ಸೇರಿದಂತೆ ಬಹುತೇಕ ಯುವತಿಯರ ಫೋನ್​ನಲ್ಲಿ ದೊಡ್ಡ ದೊಡ್ಡ ರಾಜಕಾರಣಿಗಳ ಹೆಸರು ಸೇವ್​ ಆಗಿದ್ದು, ಅವರಿಗೆ ಈ ಯುವತಿಯರು ಕರೆ ಮಾಡಿರುವುದು ತಿಳಿದು ಬಂದಿದೆ. ಆದರೆ ಸದ್ಯ ತನಿಖೆಯ ಹಂತದಲ್ಲಿರುವ ಕಾರಣ, ಯಾರ ಹೆಸರನ್ನೂ ಪೊಲೀಸರು ಬಹಿರಂಗಪಡಿಸಲಿಲ್ಲ.

ಹೋಟೆಲ್​​ನಲ್ಲಿ ಸೆಕ್ಸ್​ ದಂಧೆ ನಡೆಯುತ್ತಿದ್ದ ಬಗ್ಗೆ ರಾಯ್ಪುರ್​​ ಪೊಲೀಸ್​ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕಕ್ಕೆ ದೂರು ನೀಡಲಾಗಿತ್ತು. ಇದಕ್ಕೋಸ್ಕರ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಎಸ್​​​ಎಸ್​ಪಿ ಅಭಿಷೇಕ್​​ ಮಹೇಶ್ವರಿ ಅವರ ಸೂಚನೆಯಂತೆ ಹೋಟೆಲ್​ಗೆ ವಿಶೇಷ ತಂಡ ಲಗ್ಗೆಹಾಕಿತ್ತು. ಈ ವೇಳೆ, ದಂಧೆ ನಡೆಯುತ್ತಿರುವುದು ಕಂಡು ಬಂದಿದೆ. ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿಗಳ ಬಂಧನ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು