4:24 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಹೈ ಪ್ರೊಫೈಲ್ ಸೆಕ್ಸ್ ಹಗರಣ: ಬೆಂಗಳೂರಿನ ಯುವತಿ ಸಹಿತ 11 ಮಂದಿ ಅರೆಸ್ಟ್: ರಾಜಕಾರಣಿಗಳು ಭಾಗಿ?

25/07/2022, 19:49

ಬೆಂಗಳೂರು(reporterkarnataka.com):

ಛತ್ತೀಸಗಢದ ರಾಯ್ಪುರದ ಸ್ಟಾರ್​ ಹೋಟೆಲ್​ ನಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳ ಯುವತಿಯರನ್ನು ಇಟ್ಟುಕೊಂಡು ನಡೆಸುತ್ತಿದ್ದ ಭಾರೀ ದಂಧೆ ಬೆಳಕಿಗೆ ಬಂದಿದೆ.

ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕದ ಸಿಬ್ಬಂದಿ ಹೈ ಪ್ರೊಫೈಲ್​ ವೇಶ್ಯಾವಾಟಿಕೆ ನಡೆಸುತ್ತಿರುವುದನ್ನು ಬಯಲಿಗೆ ಎಳೆದಿದ್ದಾರೆ.

ಈ ಘಟನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಯುವತಿ ಸೇರಿದಂತೆ 11 ಮಂದಿ ಯುವತಿಯರು ಹಾಗೂ ಒಬ್ಬ ಕಿಂಗ್​ಪಿನ್​ನನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಯುವತಿ ಹೊರತುಪಡಿಸಿ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮೂಲದವರು ಎಂದು ತಿಳಿದು ಬಂದಿದೆ.

ಇನ್ನು ಇವರ ಸ್ಮಾರ್ಟ್​ಫೋನ್​ಗಳನ್ನು ತನಿಖೆಗೆ ಒಳಪಡಿಸಿದಾಗ ಬೆಂಗಳೂರಿನ ಯುವತಿ ಸೇರಿದಂತೆ ಬಹುತೇಕ ಯುವತಿಯರ ಫೋನ್​ನಲ್ಲಿ ದೊಡ್ಡ ದೊಡ್ಡ ರಾಜಕಾರಣಿಗಳ ಹೆಸರು ಸೇವ್​ ಆಗಿದ್ದು, ಅವರಿಗೆ ಈ ಯುವತಿಯರು ಕರೆ ಮಾಡಿರುವುದು ತಿಳಿದು ಬಂದಿದೆ. ಆದರೆ ಸದ್ಯ ತನಿಖೆಯ ಹಂತದಲ್ಲಿರುವ ಕಾರಣ, ಯಾರ ಹೆಸರನ್ನೂ ಪೊಲೀಸರು ಬಹಿರಂಗಪಡಿಸಲಿಲ್ಲ.

ಹೋಟೆಲ್​​ನಲ್ಲಿ ಸೆಕ್ಸ್​ ದಂಧೆ ನಡೆಯುತ್ತಿದ್ದ ಬಗ್ಗೆ ರಾಯ್ಪುರ್​​ ಪೊಲೀಸ್​ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕಕ್ಕೆ ದೂರು ನೀಡಲಾಗಿತ್ತು. ಇದಕ್ಕೋಸ್ಕರ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಎಸ್​​​ಎಸ್​ಪಿ ಅಭಿಷೇಕ್​​ ಮಹೇಶ್ವರಿ ಅವರ ಸೂಚನೆಯಂತೆ ಹೋಟೆಲ್​ಗೆ ವಿಶೇಷ ತಂಡ ಲಗ್ಗೆಹಾಕಿತ್ತು. ಈ ವೇಳೆ, ದಂಧೆ ನಡೆಯುತ್ತಿರುವುದು ಕಂಡು ಬಂದಿದೆ. ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿಗಳ ಬಂಧನ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು