2:35 AM Saturday18 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ ಸ್ವೀಕಾರ

16/06/2026, 23:24

ಬೆಂಗಳೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಖಾತೆ ಹಂಚಿಕೆ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆ ವಿಚಾರವಾಗಿ ಅಸಮಾಧಾನಗೊಂಡಿದ್ದ ಹಿರಿಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಪಟ್ಟನ್ನು ಸಡಿಲಗೊಸಿದ್ದು, ಕೊನೆಗೂ ಅಧಿಕಾರ ಸ್ವೀಕರಿಸಲು ಸಮ್ಮತಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮತ್ತು ಬಿಎಂಆರ್ಡಿಎ (BMRDA) ಸಂಸ್ಥೆಗಳನ್ನು ಹೊರತುಪಡಿಸಿ ಕೇವಲ ಬೆಂಗಳೂರು ಅಭಿವೃದ್ಧಿ ಖಾತೆ ನೀಡಿರುವುದಕ್ಕೆ ಅವರು ಈ ಹಿಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ವಿಭಜನೆಯಿಂದಾಗಿ ಆಡಳಿತಾತ್ಮಕ ಕೆಲಸ ಕಾರ್ಯಗಳಿಗೆ ಮತ್ತು ವಿವಿಧ ಇಲಾಖೆಗಳ ನಡುವಿನ ಸಮನ್ವಯತೆಗೆ ದೊಡ್ಡ ಮಟ್ಟದ ಸಮಸ್ಯೆ ಎದುರಾಗುತ್ತದೆ ಎಂಬ ಕಾರಣ ನೀಡಿ ಅವರು ಅಧಿಕಾರ ಸ್ವೀಕರಿಸದೆ ದೂರ ಉಳಿದಿದ್ದರು. ಆದರೆ, ಈಗ ನಡೆದಿರುವ ಸುದೀರ್ಘ ಮಾತುಕತೆಗಳು ಫಲಪ್ರದವಾಗಿದ್ದು, ಅವರು ಬೆಂಗಳೂರು ಅಭಿವೃದ್ಧಿ ಇಲಾಖೆಯ ಸಚಿವರಾಗಿ ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ.

*ದೆಹಲಿ ಮಟ್ಟದಲ್ಲಿ ನಡೆದಿತ್ತು ಹೈವೋಲ್ಟೇಜ್ ಸಂಧಾನ!*
ಖಾತೆ ಹಂಚಿಕೆಯಿಂದ ತೀವ್ರ ಅಸಮಾಧಾನಗೊಂಡಿದ್ದ ಕೃಷ್ಣ ಬೈರೇಗೌಡ ಅವರು ನೇರವಾಗಿ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ಬೆಂಗಳೂರಿನ ಪ್ರಮುಖ ಎರಡು ಪ್ರಾಧಿಕಾರಗಳನ್ನು ನೀಡದೆ ಕೇವಲ ನಗರ ಅಭಿವೃದ್ಧಿ ಖಾತೆ ನಿಭಾಯಿಸುವುದರಿಂದ ಆಡಳಿತದಲ್ಲಿ ಉಂಟಾಗುವ ಗೊಂದಲಗಳು ಮತ್ತು ತಾಂತ್ರಿಕ ಸಮಸ್ಯೆಗಳ ಬಗ್ಗೆ ಹಿರಿಯ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಇದೇ ಸಂದರ್ಭದಲ್ಲಿ ದೆಹಲಿಯಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೂ ಕೃಷ್ಣ ಬೈರೇಗೌಡ ಅವರು ಮುಖಾಮುಖಿ ಮಾತುಕತೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು