11:24 PM Tuesday16 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ ಸ್ವೀಕಾರ

16/06/2026, 23:24

ಬೆಂಗಳೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಖಾತೆ ಹಂಚಿಕೆ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆ ವಿಚಾರವಾಗಿ ಅಸಮಾಧಾನಗೊಂಡಿದ್ದ ಹಿರಿಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಪಟ್ಟನ್ನು ಸಡಿಲಗೊಸಿದ್ದು, ಕೊನೆಗೂ ಅಧಿಕಾರ ಸ್ವೀಕರಿಸಲು ಸಮ್ಮತಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮತ್ತು ಬಿಎಂಆರ್ಡಿಎ (BMRDA) ಸಂಸ್ಥೆಗಳನ್ನು ಹೊರತುಪಡಿಸಿ ಕೇವಲ ಬೆಂಗಳೂರು ಅಭಿವೃದ್ಧಿ ಖಾತೆ ನೀಡಿರುವುದಕ್ಕೆ ಅವರು ಈ ಹಿಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ವಿಭಜನೆಯಿಂದಾಗಿ ಆಡಳಿತಾತ್ಮಕ ಕೆಲಸ ಕಾರ್ಯಗಳಿಗೆ ಮತ್ತು ವಿವಿಧ ಇಲಾಖೆಗಳ ನಡುವಿನ ಸಮನ್ವಯತೆಗೆ ದೊಡ್ಡ ಮಟ್ಟದ ಸಮಸ್ಯೆ ಎದುರಾಗುತ್ತದೆ ಎಂಬ ಕಾರಣ ನೀಡಿ ಅವರು ಅಧಿಕಾರ ಸ್ವೀಕರಿಸದೆ ದೂರ ಉಳಿದಿದ್ದರು. ಆದರೆ, ಈಗ ನಡೆದಿರುವ ಸುದೀರ್ಘ ಮಾತುಕತೆಗಳು ಫಲಪ್ರದವಾಗಿದ್ದು, ಅವರು ಬೆಂಗಳೂರು ಅಭಿವೃದ್ಧಿ ಇಲಾಖೆಯ ಸಚಿವರಾಗಿ ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ.

*ದೆಹಲಿ ಮಟ್ಟದಲ್ಲಿ ನಡೆದಿತ್ತು ಹೈವೋಲ್ಟೇಜ್ ಸಂಧಾನ!*
ಖಾತೆ ಹಂಚಿಕೆಯಿಂದ ತೀವ್ರ ಅಸಮಾಧಾನಗೊಂಡಿದ್ದ ಕೃಷ್ಣ ಬೈರೇಗೌಡ ಅವರು ನೇರವಾಗಿ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ಬೆಂಗಳೂರಿನ ಪ್ರಮುಖ ಎರಡು ಪ್ರಾಧಿಕಾರಗಳನ್ನು ನೀಡದೆ ಕೇವಲ ನಗರ ಅಭಿವೃದ್ಧಿ ಖಾತೆ ನಿಭಾಯಿಸುವುದರಿಂದ ಆಡಳಿತದಲ್ಲಿ ಉಂಟಾಗುವ ಗೊಂದಲಗಳು ಮತ್ತು ತಾಂತ್ರಿಕ ಸಮಸ್ಯೆಗಳ ಬಗ್ಗೆ ಹಿರಿಯ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಇದೇ ಸಂದರ್ಭದಲ್ಲಿ ದೆಹಲಿಯಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೂ ಕೃಷ್ಣ ಬೈರೇಗೌಡ ಅವರು ಮುಖಾಮುಖಿ ಮಾತುಕತೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು