8:23 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಹೈವೇ ಬದಿಯಲ್ಲೇ ಮಳೆ ನೀರು ನಿಲ್ಲುವ ಕೊಳ!: ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲೇ ಇದೆ ಸ್ವಿಮ್ಮಿಂಗ್ ಪೂಲ್

22/07/2023, 14:45

ಮಂಗಳೂರು(reporterkarnataka.com): ಅದು ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ. ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುತ್ತದೆ. ಹೈವೇ ಬದಿಯಲ್ಲೇ ಕೊಳ ನಿರ್ಮಾಣವಾಗಿದೆ. ಅಂದ್ರೆ ಮಳೆ ನೀರು ಹರಿದು ಹೋಗದೆ ಕೊಳ ನಿರ್ಮಾಣವಾಗಿದೆ.

ಇದು ಹೆದ್ದಾರಿಯಲ್ಲಿ ನಿರ್ಜನ ಪ್ರದೇಶದಲ್ಲಿ ಆಗುತ್ತಿದ್ದರೆ ಯಾರೂ ತಲೆ ಬಿಸಿ ಮಾಡುತ್ತಿರಲಿಲ್ಲ. ಬದಲಿಗೆ ದಿನಕ್ಕೆ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಓಡಾಡುವ ಜಾಗದಲ್ಲೇ ನೀರು ನಿಂತಿದೆ. ವಳಚ್ಚಿಲ್ ಸಮೀಪದ ಸಹ್ಯಾದ್ರಿ ಕಾಲೇಜಿನ ಕಾಂಪೌಂಡ್ ಮುಂಭಾಗ ನೀರು ನಿಂತು ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆ ಯಲ್ಲಿ ನಡೆದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕಳೆದ 2 ದಿನ ಹಿಂದೆ ಯಷ್ಟೇ ಇಲ್ಲಿ ಅಪಘಾತವಾಗಿದೆ. ಬೆಂಗಳೂರು- ಮಂಗಳೂರು ಹೈವೇ ಆಗಿರುವುದರಿಂದ ವಾಹನಗಳ ವೇಗಕ್ಕೆ ಏನು ಕಡಿಮೆ ಇಲ್ಲ.
ಸ್ಥಳೀಯ ನಾಗರಿಕರಾದ ಮಹೇಶ್ ಅವರು
ಹೇಳುವ ಪ್ರಕಾರ ರಸ್ತೆ ಬದಿ ಇಂಟರ್ ಲಾಕ್ ಅಳವಡಿಕೆಯಿಂದ ತೋಡು ಮುಚ್ಚಿದೆ ಎಂಬುದು ಆರೋಪ. ಈ ಬಗ್ಗೆ ಆದಷ್ಟು ಬೇಗ ಸಂಬಂಧ ಪಟ್ಟ ಪಂಚಾಯತ್ ಕ್ರಮ ಜರುಗಿಸಿ ವಿದ್ಯಾರ್ಥಿಗಳ ಜೀವ ರಕ್ಷಿಸಬೇಕು ಎನ್ನುವುದು ಸ್ಥಳೀಯ ಆಗ್ರಹ.

ಇತ್ತೀಚಿನ ಸುದ್ದಿ

ಜಾಹೀರಾತು