12:04 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹೈವೇ ಬದಿಯಲ್ಲೇ ಮಳೆ ನೀರು ನಿಲ್ಲುವ ಕೊಳ!: ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲೇ ಇದೆ ಸ್ವಿಮ್ಮಿಂಗ್ ಪೂಲ್

22/07/2023, 14:45

ಮಂಗಳೂರು(reporterkarnataka.com): ಅದು ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ. ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುತ್ತದೆ. ಹೈವೇ ಬದಿಯಲ್ಲೇ ಕೊಳ ನಿರ್ಮಾಣವಾಗಿದೆ. ಅಂದ್ರೆ ಮಳೆ ನೀರು ಹರಿದು ಹೋಗದೆ ಕೊಳ ನಿರ್ಮಾಣವಾಗಿದೆ.

ಇದು ಹೆದ್ದಾರಿಯಲ್ಲಿ ನಿರ್ಜನ ಪ್ರದೇಶದಲ್ಲಿ ಆಗುತ್ತಿದ್ದರೆ ಯಾರೂ ತಲೆ ಬಿಸಿ ಮಾಡುತ್ತಿರಲಿಲ್ಲ. ಬದಲಿಗೆ ದಿನಕ್ಕೆ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಓಡಾಡುವ ಜಾಗದಲ್ಲೇ ನೀರು ನಿಂತಿದೆ. ವಳಚ್ಚಿಲ್ ಸಮೀಪದ ಸಹ್ಯಾದ್ರಿ ಕಾಲೇಜಿನ ಕಾಂಪೌಂಡ್ ಮುಂಭಾಗ ನೀರು ನಿಂತು ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆ ಯಲ್ಲಿ ನಡೆದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕಳೆದ 2 ದಿನ ಹಿಂದೆ ಯಷ್ಟೇ ಇಲ್ಲಿ ಅಪಘಾತವಾಗಿದೆ. ಬೆಂಗಳೂರು- ಮಂಗಳೂರು ಹೈವೇ ಆಗಿರುವುದರಿಂದ ವಾಹನಗಳ ವೇಗಕ್ಕೆ ಏನು ಕಡಿಮೆ ಇಲ್ಲ.
ಸ್ಥಳೀಯ ನಾಗರಿಕರಾದ ಮಹೇಶ್ ಅವರು
ಹೇಳುವ ಪ್ರಕಾರ ರಸ್ತೆ ಬದಿ ಇಂಟರ್ ಲಾಕ್ ಅಳವಡಿಕೆಯಿಂದ ತೋಡು ಮುಚ್ಚಿದೆ ಎಂಬುದು ಆರೋಪ. ಈ ಬಗ್ಗೆ ಆದಷ್ಟು ಬೇಗ ಸಂಬಂಧ ಪಟ್ಟ ಪಂಚಾಯತ್ ಕ್ರಮ ಜರುಗಿಸಿ ವಿದ್ಯಾರ್ಥಿಗಳ ಜೀವ ರಕ್ಷಿಸಬೇಕು ಎನ್ನುವುದು ಸ್ಥಳೀಯ ಆಗ್ರಹ.

ಇತ್ತೀಚಿನ ಸುದ್ದಿ

ಜಾಹೀರಾತು