12:33 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್

11/03/2025, 11:01

ಬೆಂಗಳೂರು(reporterkarnataka.com):ರಾಜ್ಯದಲ್ಲಿರುವ ಇಂಜಿನಿಯರಿಂಗ್ ಕಾಲೇಜುಗಳ ಗುಣಮಟ್ಟ ಹೆಚ್ಚಿಸಲು ಆದ್ಯತೆ ನೀಡಲಾಗಿದೆ, ಬಹಳಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 18 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮಂಜೂರಾಗಿರುತ್ತವೆ. 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಪ್ರಾರಂಭಿಸಲಾಗಿದೆ. 2 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಾದ ಅರಸೀಕೆರೆ ಮತ್ತು ದೇವದುರ್ಗ ಕಾಲೇಜುಗಳ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಪ್ರಸ್ತುತ ರಾಜ್ಯದಲ್ಲಿ 16 ಸರ್ಕಾರಿ, 8 ಖಾಸಗಿ ಅನುದಾನಿತ 138 ಖಾಸಗಿ ಅನುದಾನ ರಹಿತ ಹಾಗೂ 16 ಅಲ್ಪಸಂಖ್ಯಾತ ಖಾಸಗಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಿವೆ. 18 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಕಳೆದ 5 ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರೂ. 33159.23 ಲಕ್ಷಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಸರ್ಕಾರಿ ಕಾಲೇಜುಗಳಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಯಾವುದೇ ಕಟ್ಟಡವನ್ನು ಕಟ್ಟುವಂತಹ ಯೋಜನೆ ಇರುವುದಿಲ್ಲ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯವರಿಗೆ ವೇತನ ಹಾಗೂ ಇನ್ನಿತರ ಭತ್ಯೆಗಳನ್ನು ಖಜಾನೆ–2 ತಂತ್ರಾಂಶದ ಮೂಲಕ ಪಾವತಿಸಲಾಗುತ್ತದೆ. ಸದರಿ ಕಾಲೇಜುಗಳ ಸಿಬ್ಬಂದಿ ವೇತನ, ಕಾಲೇಜುಗಳಿಗೆ ಸಾಮಾನ್ಯ ವೆಚ್ಚ, ಕಟ್ಟಡ ವೆಚ್ಚ, ಸಾರಿಗೆ ವೆಚ್ಚ, ನಿರ್ವಹಣಾ ವೆಚ್ಚ, ಸಾಮಗ್ರಿ ಹಾಗೂ ಅತಿಥಿ ಉಪನ್ಯಾಸಕರ ಗೌರವಧನ ಪಾವತಿಸಲು ಒಟ್ಟಾರೆ ಪ್ರಸ್ತುತ ಸಾಲಿನಲ್ಲಿ ರೂ. 8526.46 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ಈ ಬಾರಿ ಆಯವ್ಯಯದಲ್ಲಿ 2000 ಬೋಧಕ ಸಿಬ್ಬಂದಿಗಳನ್ನು ತುಂಬಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು