8:32 AM Monday24 - August 2026
ಬ್ರೇಕಿಂಗ್ ನ್ಯೂಸ್
ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ

ಇತ್ತೀಚಿನ ಸುದ್ದಿ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು; ಕರ್ನಾಟಕಕ್ಕೆ 63,049 ಕೋಟಿ: ಕೇಂದ್ರ ಸಚಿವ ಕುಮಾರಸ್ವಾಮಿ

01/02/2026, 20:41

ನವದೆಹಲಿ(reporterkarnataka.com): ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಆಯವ್ಯಯದ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿದೆ ಎಂದು ರಾಜ್ಯ ಸರ್ಕಾರ ಸಾಮಾನ್ಯವಾಗಿ ದೂರುತ್ತಿತ್ತು. 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶೇ 4.13ರಷ್ಟು ತೆರಿಗೆ ಪಾಲು ಹಂಚಿಕೆಗೆ ಶಿಫಾರಸು ಮಾಡಿದೆ. 15ನೇ ಹಣಕಾಸು ಆಯೋಗವು ಶೇ 3.64 ಹಂಚಿಕೆ ಮಾಡಿತ್ತು. ಹೊಸದಾಗಿ ಹಂಚಿಕೆ ಆಗಿರುವುದರ ಮೂಲಕ ರಾಜ್ಯಕ್ಕೆ 2026-27ನೇ ಸಾಲಿನಲ್ಲಿ ₹63,049 ಕೋಟಿ ತೆರಿಗೆ ಪಾಲು ದೊರೆಯಲಿದೆ. ಇನ್ನು ಮುಂದೆ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ರಾಜಕೀಯವಾಗಿ ಕೇಂದ್ರವನ್ನು ಟೀಕೆ ಮಾಡುವುದನ್ನು ಬಿಡಬೇಕು ಎಂದು ಹೇಳಿದ್ದಾರೆ.
ಈ ಬಜೆಟ್ ನಲ್ಲಿ ಕರ್ನಾಟಕಕ್ಕೆ ನಿರಾಶೆಯೇನೂ ಆಗಿಲ್ಲ. ತೆಂಗು ಪ್ರೋತ್ಸಾಹ ಯೋಜನೆಯಡಿ ತೆಂಗಿನ ಉತ್ಪಾದನೆ ಹೆಚ್ಚಳಕ್ಕೆ ಉತ್ತೇಜನ ಕೊಡಲಾಗಿದೆ. ಹಾಗೆಯೇ ಗೋಡಂಬಿ ಮತ್ತು ಕೋಕೋವನ್ನು 2030ರ ವೇಳೆಗೆ ಪ್ರೀಮಿಯಂ ಗ್ಲೋಬಲ್ ಬ್ರಾಂಡ್ ಆಗಿ ರೂಪಿಸುವ ಅಂಶವು ಮುಂಗಡ ಪತ್ರದಲ್ಲಿ ಸೇರಿದೆ. ಶ್ರೀಗಂಧ, ತೆಂಗು ಬೆಳೆ, ಕೋಕೋ ಬೆಳೆಗೆ ವಿಶೇಷ ಯೋಜನೆ ಮೂಲಕ ರಾಜ್ಯದ ಹಲವಾರು ಜಿಲ್ಲೆಗಳಿಗೆ ಉಪಯೋಗ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಹೈದರಾಬಾದ್-ಬೆಂಗಳೂರು, ಬೆಂಗಳೂರು ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ರಾಜ್ಯಕ್ಕೆ ವರದಾನವಾಗಲಿದೆ. ಈಗಾಗಲೇ ರಾಜ್ಯದ ಹಲವು ವೇಗದ ರೈಲುಗಳು ಕಾರ್ಯಾಚರಿಸುತ್ತಿದ್ದು, ವಂದೇ ಭಾರತ್ ರೈಲುಗಳು ಕೂಡ ಸೇರ್ಪಡೆಯಾಗಿದೆ. ಈಗ ಹೈ ಸ್ಪೀಡ್ ರೈಲುಗಳು ರಾಜ್ಯಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರೈಲು ಸಂಪರ್ಕದಲ್ಲಿ ಹೊಸ ಕ್ರಾಂತಿ ಆಗಲಿದೆ ಎಂದು ಸಚಿವರು ಪ್ರತಿಪಾದಿಸಿದರು.
ಇದು ಕೇವಲ ಅಂಕಿ ಅಂಶಗಳ ಮುಂಗಡ ಪತ್ರವಲ್ಲ, ಬದಲಿಗೆ ಮುನ್ನೋಟ, ಮುಂದಾಲೋಚನೆ, ವಿಕಾಸ, ಫಲಿತಾಂಶ ಆಧರಿತ ಮುಂಗಡ ಪತ್ರವಾಗಿದೆ. ವಿಕಸಿತ ಭಾರತ ಗುರಿ ಸಾಕಾರಕ್ಕೆ ಇದು ಪೂರಕವಾಗಿದೆ. 2047ಕ್ಕೆ ನಾವು ಈ ಗುರಿ ಸಾಧನೆ ಮಾಡಬೇಕು, ಅದಕ್ಕೆ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಈ ಬಜೆಟ್ ಸ್ಪಷ್ಟ ದಿಕ್ಸೂಚಿ ತೋರಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಗ್ರಾಮೀಣ ಭಾರತಕ್ಕೆ ಮನ್ನಣೆ ಕೊಡಲಾಗಿದೆ. ಪ್ರತಿ ರಾಜ್ಯ, ಪ್ರತಿ ಜಿಲ್ಲೆ, ಪ್ರತಿ ತಾಲೂಕು, ಪ್ರತಿ ಪಂಚಾಯಿತಿ, ಪ್ರತಿ ಹಳ್ಳಿ ಮುಂಗಡಪತ್ರದಲ್ಲಿ ಒಳಗೊಂಡಿದೆ. ವಿಶಾಲ, ವಿಸ್ತೃತ, ವಿಕಾಸ; ಇದು ಮೋದಿ ಅವರ ಲೋಕದೃಷ್ಟಿ. ಅದಕ್ಕೆ ತಕ್ಕಂತೆ ಮುಂಗಡಪತ್ರ ಮೂಡಿ ಬಂದಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು