5:09 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಹೈಟೆಕ್ ಸೆಕ್ಸ್ ದಂಧೆ: ಬೆಂಗಳೂರಿನ ಯುವತಿ ಸೇರಿದಂತೆ 12 ಮಂದಿ ಬಂಧನ;  ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟು?

14/09/2022, 13:46

ಭೂಪಾಲ್ (reporterkarnataka.com):ಹೈ ಪ್ರೊಫೈಲ್ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ 11 ಯುವತಿಯರು ಹಾಗೂ ಓರ್ವ ಕಿಂಗ್​​ಪಿನ್​ ಬಂಧಿಸಲಾಗಿದೆ. ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟಿನ ವಾಸನೆ ಬಡಿಯಲಾರಂಭಿಸಿದೆ. ಇದೆಲ್ಲ ನಡೆದದ್ದು ಮಧ್ಯಪ್ರದೇಶದ ರಾಯ್ಪುರದಲ್ಲಿ.

ಹೋಟೆಲ್​​​ನಲ್ಲಿ ಈ ಅಕ್ರಮ ದಂಧೆ ನಡೆಯುತ್ತಿದ್ದ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಬಂದಿತ್ತು. ಅದರ ಅನ್ವಯ ಕಾರ್ಯಾಚರಣೆ ನಡೆಸಲಾಗಿದೆ.

11 ಯುವತಿಯರು, ಓರ್ವ ಕಿಂಗ್​ಪಿನ್​ ಬಂಧನ:

ರಾಯ್ಪುರ್​​ದ ಪ್ರಮುಖ ಫೋರ್​​​ಸ್ಟಾರ್​​ ಹೋಟೆಲ್​​ನಲ್ಲಿ ಹೈ-ಪ್ರೊಫೈಲ್​ ಸೆಕ್ಸ್ ರಾಕೆಟ್ ದಂಧೆ ನಡೆಸಲಾಗ್ತಿತ್ತು. ಇಂದು ಬೆಳಗ್ಗೆ ಪೊಲೀಸರು ದಿಢೀರ್​ ದಾಳಿ ನಡೆಸಿದ್ದು, ಈ ವೇಳೆ ಬೆಂಗಳೂರಿನ ಓರ್ವ ಯುವತಿ ಸೇರಿದಂತೆ 11 ಹುಡುಗಿಯರು ಹಾಗೂ ಓರ್ವ ಕಿಂಗ್​ ಪಿನ್​ ಬಲೆಗೆ ಬಿದ್ದಿದ್ದಾರೆ.

ಬಂಧಿತ ಯುವತಿಯರು ಮೂಲತಃ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮತ್ತು ಬೆಂಗಳೂರು ಮೂಲದವರು ಎಂದು ವರದಿಯಾಗಿದೆ. ಇವರೆಲ್ಲರೂ ಸೆಕ್ಸ್ ರಾಕೆಟ್ ದಂಧೆಗೆ ಇಳಿದಿದ್ದರು. ಬಂಧಿತ ಹುಡುಗಿಯರ ಮೊಬೈಲ್​ ಫೋನ್​​ಗಳಲ್ಲಿನ ಚಾಟ್ ಸಂದೇಶ ಚೆಕ್​ ಮಾಡಿರುವ ಪೊಲೀಸರಿಗೆ ಶಾಕ್ ಆಗಿದ್ದು, ಇದರಲ್ಲಿ ಕೆಲ ರಾಜಕೀಯ ನಾಯಕರ ಹೆಸರು ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಅವರ ಹೆಸರು ಬಹಿರಂಗಪಡಿಸಿಲ್ಲ.

ರಾಜಕೀಯ ನಾಯಕರ ನಂಟು: ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿರುವ ಯುವತಿಯರು ಅನೇಕ ರಾಜಕೀಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದು, ಅವರು ಬಳಕೆ ಮಾಡ್ತಿದ್ದ ಮೊಬೈಲ್​ ಫೋನ್​​ಗಳಿಂದ ಈ ಮಹತ್ವದ ಮಾಹಿತಿ ಹೊರಬಿದ್ದಿದೆ. ಆದರೆ, ಯಾವೆಲ್ಲ ರಾಜಕೀಯ ನಾಯಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಹೊರಹಾಕಿಲ್ಲ.

ಹೋಟೆಲ್​​ನಲ್ಲಿ ಸೆಕ್ಸ್​ ದಂಧೆ ನಡೆಯುತ್ತಿದ್ದ ಬಗ್ಗೆ ರಾಯ್ಪುರ್​​ ಪೊಲೀಸ್​ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕಕ್ಕೆ ದೂರು ನೀಡಲಾಗಿತ್ತು. ಇದಕ್ಕೋಸ್ಕರ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಎಸ್​​​ಎಸ್​ಪಿ ಅಭಿಷೇಕ್​​ ಮಹೇಶ್ವರಿ ಅವರ ಸೂಚನೆಯಂತೆ ಹೋಟೆಲ್​ಗೆ ವಿಶೇಷ ತಂಡ ಲಗ್ಗೆಹಾಕಿತ್ತು. ಈ ವೇಳೆ, ದಂಧೆ ನಡೆಯುತ್ತಿರುವುದು ಕಂಡು ಬಂದಿದೆ. ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿಗಳ ಬಂಧನ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು