3:02 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಹೈಟೆಕ್ ಸೆಕ್ಸ್ ದಂಧೆ: ಬೆಂಗಳೂರಿನ ಯುವತಿ ಸೇರಿದಂತೆ 12 ಮಂದಿ ಬಂಧನ;  ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟು?

14/09/2022, 13:46

ಭೂಪಾಲ್ (reporterkarnataka.com):ಹೈ ಪ್ರೊಫೈಲ್ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ 11 ಯುವತಿಯರು ಹಾಗೂ ಓರ್ವ ಕಿಂಗ್​​ಪಿನ್​ ಬಂಧಿಸಲಾಗಿದೆ. ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟಿನ ವಾಸನೆ ಬಡಿಯಲಾರಂಭಿಸಿದೆ. ಇದೆಲ್ಲ ನಡೆದದ್ದು ಮಧ್ಯಪ್ರದೇಶದ ರಾಯ್ಪುರದಲ್ಲಿ.

ಹೋಟೆಲ್​​​ನಲ್ಲಿ ಈ ಅಕ್ರಮ ದಂಧೆ ನಡೆಯುತ್ತಿದ್ದ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಬಂದಿತ್ತು. ಅದರ ಅನ್ವಯ ಕಾರ್ಯಾಚರಣೆ ನಡೆಸಲಾಗಿದೆ.

11 ಯುವತಿಯರು, ಓರ್ವ ಕಿಂಗ್​ಪಿನ್​ ಬಂಧನ:

ರಾಯ್ಪುರ್​​ದ ಪ್ರಮುಖ ಫೋರ್​​​ಸ್ಟಾರ್​​ ಹೋಟೆಲ್​​ನಲ್ಲಿ ಹೈ-ಪ್ರೊಫೈಲ್​ ಸೆಕ್ಸ್ ರಾಕೆಟ್ ದಂಧೆ ನಡೆಸಲಾಗ್ತಿತ್ತು. ಇಂದು ಬೆಳಗ್ಗೆ ಪೊಲೀಸರು ದಿಢೀರ್​ ದಾಳಿ ನಡೆಸಿದ್ದು, ಈ ವೇಳೆ ಬೆಂಗಳೂರಿನ ಓರ್ವ ಯುವತಿ ಸೇರಿದಂತೆ 11 ಹುಡುಗಿಯರು ಹಾಗೂ ಓರ್ವ ಕಿಂಗ್​ ಪಿನ್​ ಬಲೆಗೆ ಬಿದ್ದಿದ್ದಾರೆ.

ಬಂಧಿತ ಯುವತಿಯರು ಮೂಲತಃ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮತ್ತು ಬೆಂಗಳೂರು ಮೂಲದವರು ಎಂದು ವರದಿಯಾಗಿದೆ. ಇವರೆಲ್ಲರೂ ಸೆಕ್ಸ್ ರಾಕೆಟ್ ದಂಧೆಗೆ ಇಳಿದಿದ್ದರು. ಬಂಧಿತ ಹುಡುಗಿಯರ ಮೊಬೈಲ್​ ಫೋನ್​​ಗಳಲ್ಲಿನ ಚಾಟ್ ಸಂದೇಶ ಚೆಕ್​ ಮಾಡಿರುವ ಪೊಲೀಸರಿಗೆ ಶಾಕ್ ಆಗಿದ್ದು, ಇದರಲ್ಲಿ ಕೆಲ ರಾಜಕೀಯ ನಾಯಕರ ಹೆಸರು ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಅವರ ಹೆಸರು ಬಹಿರಂಗಪಡಿಸಿಲ್ಲ.

ರಾಜಕೀಯ ನಾಯಕರ ನಂಟು: ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿರುವ ಯುವತಿಯರು ಅನೇಕ ರಾಜಕೀಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದು, ಅವರು ಬಳಕೆ ಮಾಡ್ತಿದ್ದ ಮೊಬೈಲ್​ ಫೋನ್​​ಗಳಿಂದ ಈ ಮಹತ್ವದ ಮಾಹಿತಿ ಹೊರಬಿದ್ದಿದೆ. ಆದರೆ, ಯಾವೆಲ್ಲ ರಾಜಕೀಯ ನಾಯಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಹೊರಹಾಕಿಲ್ಲ.

ಹೋಟೆಲ್​​ನಲ್ಲಿ ಸೆಕ್ಸ್​ ದಂಧೆ ನಡೆಯುತ್ತಿದ್ದ ಬಗ್ಗೆ ರಾಯ್ಪುರ್​​ ಪೊಲೀಸ್​ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕಕ್ಕೆ ದೂರು ನೀಡಲಾಗಿತ್ತು. ಇದಕ್ಕೋಸ್ಕರ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಎಸ್​​​ಎಸ್​ಪಿ ಅಭಿಷೇಕ್​​ ಮಹೇಶ್ವರಿ ಅವರ ಸೂಚನೆಯಂತೆ ಹೋಟೆಲ್​ಗೆ ವಿಶೇಷ ತಂಡ ಲಗ್ಗೆಹಾಕಿತ್ತು. ಈ ವೇಳೆ, ದಂಧೆ ನಡೆಯುತ್ತಿರುವುದು ಕಂಡು ಬಂದಿದೆ. ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿಗಳ ಬಂಧನ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು