5:27 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಹೈಟೆಕ್ ಸೆಕ್ಸ್ ದಂಧೆ: ಬೆಂಗಳೂರಿನ ಯುವತಿ ಸೇರಿದಂತೆ 12 ಮಂದಿ ಬಂಧನ;  ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟು?

14/09/2022, 13:46

ಭೂಪಾಲ್ (reporterkarnataka.com):ಹೈ ಪ್ರೊಫೈಲ್ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ 11 ಯುವತಿಯರು ಹಾಗೂ ಓರ್ವ ಕಿಂಗ್​​ಪಿನ್​ ಬಂಧಿಸಲಾಗಿದೆ. ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟಿನ ವಾಸನೆ ಬಡಿಯಲಾರಂಭಿಸಿದೆ. ಇದೆಲ್ಲ ನಡೆದದ್ದು ಮಧ್ಯಪ್ರದೇಶದ ರಾಯ್ಪುರದಲ್ಲಿ.

ಹೋಟೆಲ್​​​ನಲ್ಲಿ ಈ ಅಕ್ರಮ ದಂಧೆ ನಡೆಯುತ್ತಿದ್ದ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಬಂದಿತ್ತು. ಅದರ ಅನ್ವಯ ಕಾರ್ಯಾಚರಣೆ ನಡೆಸಲಾಗಿದೆ.

11 ಯುವತಿಯರು, ಓರ್ವ ಕಿಂಗ್​ಪಿನ್​ ಬಂಧನ:

ರಾಯ್ಪುರ್​​ದ ಪ್ರಮುಖ ಫೋರ್​​​ಸ್ಟಾರ್​​ ಹೋಟೆಲ್​​ನಲ್ಲಿ ಹೈ-ಪ್ರೊಫೈಲ್​ ಸೆಕ್ಸ್ ರಾಕೆಟ್ ದಂಧೆ ನಡೆಸಲಾಗ್ತಿತ್ತು. ಇಂದು ಬೆಳಗ್ಗೆ ಪೊಲೀಸರು ದಿಢೀರ್​ ದಾಳಿ ನಡೆಸಿದ್ದು, ಈ ವೇಳೆ ಬೆಂಗಳೂರಿನ ಓರ್ವ ಯುವತಿ ಸೇರಿದಂತೆ 11 ಹುಡುಗಿಯರು ಹಾಗೂ ಓರ್ವ ಕಿಂಗ್​ ಪಿನ್​ ಬಲೆಗೆ ಬಿದ್ದಿದ್ದಾರೆ.

ಬಂಧಿತ ಯುವತಿಯರು ಮೂಲತಃ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮತ್ತು ಬೆಂಗಳೂರು ಮೂಲದವರು ಎಂದು ವರದಿಯಾಗಿದೆ. ಇವರೆಲ್ಲರೂ ಸೆಕ್ಸ್ ರಾಕೆಟ್ ದಂಧೆಗೆ ಇಳಿದಿದ್ದರು. ಬಂಧಿತ ಹುಡುಗಿಯರ ಮೊಬೈಲ್​ ಫೋನ್​​ಗಳಲ್ಲಿನ ಚಾಟ್ ಸಂದೇಶ ಚೆಕ್​ ಮಾಡಿರುವ ಪೊಲೀಸರಿಗೆ ಶಾಕ್ ಆಗಿದ್ದು, ಇದರಲ್ಲಿ ಕೆಲ ರಾಜಕೀಯ ನಾಯಕರ ಹೆಸರು ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಅವರ ಹೆಸರು ಬಹಿರಂಗಪಡಿಸಿಲ್ಲ.

ರಾಜಕೀಯ ನಾಯಕರ ನಂಟು: ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿರುವ ಯುವತಿಯರು ಅನೇಕ ರಾಜಕೀಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದು, ಅವರು ಬಳಕೆ ಮಾಡ್ತಿದ್ದ ಮೊಬೈಲ್​ ಫೋನ್​​ಗಳಿಂದ ಈ ಮಹತ್ವದ ಮಾಹಿತಿ ಹೊರಬಿದ್ದಿದೆ. ಆದರೆ, ಯಾವೆಲ್ಲ ರಾಜಕೀಯ ನಾಯಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಹೊರಹಾಕಿಲ್ಲ.

ಹೋಟೆಲ್​​ನಲ್ಲಿ ಸೆಕ್ಸ್​ ದಂಧೆ ನಡೆಯುತ್ತಿದ್ದ ಬಗ್ಗೆ ರಾಯ್ಪುರ್​​ ಪೊಲೀಸ್​ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕಕ್ಕೆ ದೂರು ನೀಡಲಾಗಿತ್ತು. ಇದಕ್ಕೋಸ್ಕರ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಎಸ್​​​ಎಸ್​ಪಿ ಅಭಿಷೇಕ್​​ ಮಹೇಶ್ವರಿ ಅವರ ಸೂಚನೆಯಂತೆ ಹೋಟೆಲ್​ಗೆ ವಿಶೇಷ ತಂಡ ಲಗ್ಗೆಹಾಕಿತ್ತು. ಈ ವೇಳೆ, ದಂಧೆ ನಡೆಯುತ್ತಿರುವುದು ಕಂಡು ಬಂದಿದೆ. ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿಗಳ ಬಂಧನ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು