12:18 PM Monday4 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಹೈಟೆಕ್ ಸೆಕ್ಸ್ ದಂಧೆ: ಬೆಂಗಳೂರಿನ ಯುವತಿ ಸೇರಿದಂತೆ 12 ಮಂದಿ ಬಂಧನ;  ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟು?

14/09/2022, 13:46

ಭೂಪಾಲ್ (reporterkarnataka.com):ಹೈ ಪ್ರೊಫೈಲ್ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ 11 ಯುವತಿಯರು ಹಾಗೂ ಓರ್ವ ಕಿಂಗ್​​ಪಿನ್​ ಬಂಧಿಸಲಾಗಿದೆ. ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟಿನ ವಾಸನೆ ಬಡಿಯಲಾರಂಭಿಸಿದೆ. ಇದೆಲ್ಲ ನಡೆದದ್ದು ಮಧ್ಯಪ್ರದೇಶದ ರಾಯ್ಪುರದಲ್ಲಿ.

ಹೋಟೆಲ್​​​ನಲ್ಲಿ ಈ ಅಕ್ರಮ ದಂಧೆ ನಡೆಯುತ್ತಿದ್ದ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಬಂದಿತ್ತು. ಅದರ ಅನ್ವಯ ಕಾರ್ಯಾಚರಣೆ ನಡೆಸಲಾಗಿದೆ.

11 ಯುವತಿಯರು, ಓರ್ವ ಕಿಂಗ್​ಪಿನ್​ ಬಂಧನ:

ರಾಯ್ಪುರ್​​ದ ಪ್ರಮುಖ ಫೋರ್​​​ಸ್ಟಾರ್​​ ಹೋಟೆಲ್​​ನಲ್ಲಿ ಹೈ-ಪ್ರೊಫೈಲ್​ ಸೆಕ್ಸ್ ರಾಕೆಟ್ ದಂಧೆ ನಡೆಸಲಾಗ್ತಿತ್ತು. ಇಂದು ಬೆಳಗ್ಗೆ ಪೊಲೀಸರು ದಿಢೀರ್​ ದಾಳಿ ನಡೆಸಿದ್ದು, ಈ ವೇಳೆ ಬೆಂಗಳೂರಿನ ಓರ್ವ ಯುವತಿ ಸೇರಿದಂತೆ 11 ಹುಡುಗಿಯರು ಹಾಗೂ ಓರ್ವ ಕಿಂಗ್​ ಪಿನ್​ ಬಲೆಗೆ ಬಿದ್ದಿದ್ದಾರೆ.

ಬಂಧಿತ ಯುವತಿಯರು ಮೂಲತಃ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮತ್ತು ಬೆಂಗಳೂರು ಮೂಲದವರು ಎಂದು ವರದಿಯಾಗಿದೆ. ಇವರೆಲ್ಲರೂ ಸೆಕ್ಸ್ ರಾಕೆಟ್ ದಂಧೆಗೆ ಇಳಿದಿದ್ದರು. ಬಂಧಿತ ಹುಡುಗಿಯರ ಮೊಬೈಲ್​ ಫೋನ್​​ಗಳಲ್ಲಿನ ಚಾಟ್ ಸಂದೇಶ ಚೆಕ್​ ಮಾಡಿರುವ ಪೊಲೀಸರಿಗೆ ಶಾಕ್ ಆಗಿದ್ದು, ಇದರಲ್ಲಿ ಕೆಲ ರಾಜಕೀಯ ನಾಯಕರ ಹೆಸರು ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಅವರ ಹೆಸರು ಬಹಿರಂಗಪಡಿಸಿಲ್ಲ.

ರಾಜಕೀಯ ನಾಯಕರ ನಂಟು: ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿರುವ ಯುವತಿಯರು ಅನೇಕ ರಾಜಕೀಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದು, ಅವರು ಬಳಕೆ ಮಾಡ್ತಿದ್ದ ಮೊಬೈಲ್​ ಫೋನ್​​ಗಳಿಂದ ಈ ಮಹತ್ವದ ಮಾಹಿತಿ ಹೊರಬಿದ್ದಿದೆ. ಆದರೆ, ಯಾವೆಲ್ಲ ರಾಜಕೀಯ ನಾಯಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಹೊರಹಾಕಿಲ್ಲ.

ಹೋಟೆಲ್​​ನಲ್ಲಿ ಸೆಕ್ಸ್​ ದಂಧೆ ನಡೆಯುತ್ತಿದ್ದ ಬಗ್ಗೆ ರಾಯ್ಪುರ್​​ ಪೊಲೀಸ್​ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕಕ್ಕೆ ದೂರು ನೀಡಲಾಗಿತ್ತು. ಇದಕ್ಕೋಸ್ಕರ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಎಸ್​​​ಎಸ್​ಪಿ ಅಭಿಷೇಕ್​​ ಮಹೇಶ್ವರಿ ಅವರ ಸೂಚನೆಯಂತೆ ಹೋಟೆಲ್​ಗೆ ವಿಶೇಷ ತಂಡ ಲಗ್ಗೆಹಾಕಿತ್ತು. ಈ ವೇಳೆ, ದಂಧೆ ನಡೆಯುತ್ತಿರುವುದು ಕಂಡು ಬಂದಿದೆ. ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿಗಳ ಬಂಧನ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು