4:34 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಹೈಟೆಕ್ ಸೆಕ್ಸ್ ದಂಧೆ: ಬೆಂಗಳೂರಿನ ಯುವತಿ ಸೇರಿದಂತೆ 12 ಮಂದಿ ಬಂಧನ;  ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟು?

14/09/2022, 13:46

ಭೂಪಾಲ್ (reporterkarnataka.com):ಹೈ ಪ್ರೊಫೈಲ್ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ 11 ಯುವತಿಯರು ಹಾಗೂ ಓರ್ವ ಕಿಂಗ್​​ಪಿನ್​ ಬಂಧಿಸಲಾಗಿದೆ. ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟಿನ ವಾಸನೆ ಬಡಿಯಲಾರಂಭಿಸಿದೆ. ಇದೆಲ್ಲ ನಡೆದದ್ದು ಮಧ್ಯಪ್ರದೇಶದ ರಾಯ್ಪುರದಲ್ಲಿ.

ಹೋಟೆಲ್​​​ನಲ್ಲಿ ಈ ಅಕ್ರಮ ದಂಧೆ ನಡೆಯುತ್ತಿದ್ದ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಬಂದಿತ್ತು. ಅದರ ಅನ್ವಯ ಕಾರ್ಯಾಚರಣೆ ನಡೆಸಲಾಗಿದೆ.

11 ಯುವತಿಯರು, ಓರ್ವ ಕಿಂಗ್​ಪಿನ್​ ಬಂಧನ:

ರಾಯ್ಪುರ್​​ದ ಪ್ರಮುಖ ಫೋರ್​​​ಸ್ಟಾರ್​​ ಹೋಟೆಲ್​​ನಲ್ಲಿ ಹೈ-ಪ್ರೊಫೈಲ್​ ಸೆಕ್ಸ್ ರಾಕೆಟ್ ದಂಧೆ ನಡೆಸಲಾಗ್ತಿತ್ತು. ಇಂದು ಬೆಳಗ್ಗೆ ಪೊಲೀಸರು ದಿಢೀರ್​ ದಾಳಿ ನಡೆಸಿದ್ದು, ಈ ವೇಳೆ ಬೆಂಗಳೂರಿನ ಓರ್ವ ಯುವತಿ ಸೇರಿದಂತೆ 11 ಹುಡುಗಿಯರು ಹಾಗೂ ಓರ್ವ ಕಿಂಗ್​ ಪಿನ್​ ಬಲೆಗೆ ಬಿದ್ದಿದ್ದಾರೆ.

ಬಂಧಿತ ಯುವತಿಯರು ಮೂಲತಃ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮತ್ತು ಬೆಂಗಳೂರು ಮೂಲದವರು ಎಂದು ವರದಿಯಾಗಿದೆ. ಇವರೆಲ್ಲರೂ ಸೆಕ್ಸ್ ರಾಕೆಟ್ ದಂಧೆಗೆ ಇಳಿದಿದ್ದರು. ಬಂಧಿತ ಹುಡುಗಿಯರ ಮೊಬೈಲ್​ ಫೋನ್​​ಗಳಲ್ಲಿನ ಚಾಟ್ ಸಂದೇಶ ಚೆಕ್​ ಮಾಡಿರುವ ಪೊಲೀಸರಿಗೆ ಶಾಕ್ ಆಗಿದ್ದು, ಇದರಲ್ಲಿ ಕೆಲ ರಾಜಕೀಯ ನಾಯಕರ ಹೆಸರು ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಅವರ ಹೆಸರು ಬಹಿರಂಗಪಡಿಸಿಲ್ಲ.

ರಾಜಕೀಯ ನಾಯಕರ ನಂಟು: ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿರುವ ಯುವತಿಯರು ಅನೇಕ ರಾಜಕೀಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದು, ಅವರು ಬಳಕೆ ಮಾಡ್ತಿದ್ದ ಮೊಬೈಲ್​ ಫೋನ್​​ಗಳಿಂದ ಈ ಮಹತ್ವದ ಮಾಹಿತಿ ಹೊರಬಿದ್ದಿದೆ. ಆದರೆ, ಯಾವೆಲ್ಲ ರಾಜಕೀಯ ನಾಯಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಹೊರಹಾಕಿಲ್ಲ.

ಹೋಟೆಲ್​​ನಲ್ಲಿ ಸೆಕ್ಸ್​ ದಂಧೆ ನಡೆಯುತ್ತಿದ್ದ ಬಗ್ಗೆ ರಾಯ್ಪುರ್​​ ಪೊಲೀಸ್​ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕಕ್ಕೆ ದೂರು ನೀಡಲಾಗಿತ್ತು. ಇದಕ್ಕೋಸ್ಕರ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಎಸ್​​​ಎಸ್​ಪಿ ಅಭಿಷೇಕ್​​ ಮಹೇಶ್ವರಿ ಅವರ ಸೂಚನೆಯಂತೆ ಹೋಟೆಲ್​ಗೆ ವಿಶೇಷ ತಂಡ ಲಗ್ಗೆಹಾಕಿತ್ತು. ಈ ವೇಳೆ, ದಂಧೆ ನಡೆಯುತ್ತಿರುವುದು ಕಂಡು ಬಂದಿದೆ. ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿಗಳ ಬಂಧನ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು