11:11 PM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಹೀಗೊಬ್ಬಳು.. ಬಾಲೆ ಶಬರಿ!!: ಪ್ರಧಾನಿ ಮೋದಿ ಆಗಮನಕ್ಕೆ ಕಾದು ಕೂತ 3ರ ಹರೆಯದ ಪುಟಾಣಿ!; ಪಿಎಂಗೆ ಪಾಯಸದೂಟ ತಿನ್ನಿಸುವ ಆಸೆ!!

29/01/2023, 15:32

ವಿಜಯನಗರ(reportrerkarnataka.com): ಪ್ರಧಾನಿ ನರೇಂದ್ರ ಮೋದಿ ನಮ್ಮ ಮನೆಗೆ ಬಂದು ಪಾಯಸ- ಅನ್ನ ಸಾರು ಉಂಡು ಟೀ ಕುಡಿದು ಹೋಗಬೇಕು. ಇದು ನನ್ನಾಸೆ….ಹೀಗೆಂತ ಹೇಳುತ್ತಿರುವುದು ಯಾವುದೇ ಸಚಿವ, ಶಾಸಕರು ಅಲ್ಲ, ಬದಲಿಗೆ 3ರ ಹರೆಯ ಪುಟ್ಟ ಹುಡ್ಗಿ. ವಿಜಯನಗರ ಜಿಲ್ಲೆಯ ಕೂಡ್ಲಗಿ ಪಟ್ಟಣದ ಮೂರು ವರ್ಷದ ಬಾಲೆ ಹೀಗೆ ಹೇಳುತ್ತಿರುವುದನ್ನು ಕೇಳಿದರೆ ಎಂಥವರಿಗೂ ಕೂಡ ಅಚ್ಚರಿಯಾಗಬಹುದು. ಯಾಕೆಂದರೆ ಆಕೆಗೆ ಪ್ರಧಾನಿ ಮೋದಿ ಯಾವ ಪಕ್ಷವರು ಎನ್ನುವುದು ಗೊತ್ತಿಲ್ಲ. ಅವರು ಬಾರತದ ಪ್ರಧಾನಿ ಅಂತಾನು ತಿಳಿದಿಲ್ಲ. ಆದ್ರೆ ಮೋದಿ ಅವಳಿಗೆ ಇಷ್ಟವಂತೆ. ತುಂಬಾನೆ ಇಷ್ಟವಂತೆ. ವಿಶೇಷವೆಂದರೆ ಈ ಬಾಲೆಯ ಮನೆಯಲ್ಲಿ ಟಿವಿ ಕೂಡ ಇಲ್ಲ, ಸ್ಮಾರ್ಟ್ ಫೋನ್ ಕೂಡ ಇಲ್ಲ. ಆದ್ರೆ ಪ್ರಧಾನಿ ನರೇಂದ್ರ ಮೋದಿ ಅವರ ಪರಿಚಯವಿದೆ ಆಕೆಗೆ. ನರೇಂದ್ರ ಮೋದಿ ಗೊತ್ತಾ.. ಅವರು ನಮ್ಮ ಮನಗೆ ಊಟಕ್ಕೆ ಬರಬೇಕು ಅಷ್ಟೇ.. ಮೋದಿ ಅವರೇ ನಮ್ಮ ಮನೆಗೆ ಬಂದು ಪ‍ಾಯಸ‍ಾ…ಅನ್ನ ಸಾರು ಉಂಡು ಟೀ ಕುಡಿದು ಹೋಗಬೇಕು..ಅದು ನನ್ನಿಷ್ಟ.. ಅವರು ಬಂದೇ ಬರುತ್ತಾರೆ ಎನ್ನುತ್ತಾಳೆ ಹರಣಿ. ದಿನಕ್ಕೊಮ್ಮೆಯಾದರೂ ಮೋದಿ ಬಗ್ಗೆ ತನ್ನ ತಾಯಿ ರೇಣುಕಮ್ಮಳೊಂದಿಗೆ ವಿಚಾರಿಸುತ್ತಿರುತ್ತಾಳೆ, ಆಕೆ ತನ್ನ ಸ್ನೇಹಿತರೊಂದಿಗೆ ಆಟವಾಡುವಾಗ ಕೂಡ ಸ್ನೇಹಿತರಲ್ಲಿ ಯಾರಾದರೂ ಒಬ್ಬ ಹುಡುಗನಿಗೆ ಮೋದಿ ಅವರ ಹೆಸರನ್ನಿಡುತ್ತಾಳೆ. ಇದನ್ನ ಕಂಡ ನೆರೆ ಹೊರೆಯವರು ಬೆರಗಾಗಿದ್ದಾರೆ. ಆಟ ಆಡುವಾಗಲೂ ಕೂಡ ನರೇಂದ್ರ ಮೋದಿ ಯ ಬಗ್ಗೆ ಗುನುಗುಡುತ್ತಾಳೆ ಈ ಬಾಲೆ. ಅವರು ತುಂಬಾ ಒಳ್ಳೆಯವರು ಅದಕ್ಕೇ ನನಗಿಷ್ಟ ಎನ್ನುತ್ತಾಳೆ.


ಬಾಲೆ ಹರಣಿಯ ತಂದೆ ಎರಡು ವರ್ಷದ ಹಿದೆಯಷ್ಟೇ, ಕೋವಿಡ್ ನಲ್ಲಿ ನಿಧನರಾಗಿದ್ದಾರೆ. ತಾಯಿ ರೇಣುಕಾ ಹಾಗೂ ಇವಳ ಸಹೋದರ ಬಾಲಕ ವಿನಾಯಕ ಸೇರಿದಂತೆ, ಮೂರೇ ಮೂರು ಜನರಿರುವ ಪುಟ್ಟ ಬಡ ಕುಟುಂಬದಲ್ಲಿ ವಾಸಿಸುತ್ತಿದ್ದಾಳೆ‌. ರಾಮಾಯಣದಲ್ಲಿ ಶಬರಿ ಮಾತೆ ಶ್ರೀರಾಮನ ಆತಿಥ್ಯಕ್ಕಾಗಿ ಕಾಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು