11:07 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಹೀಗೊಂದು ಹಾವಿನ ದ್ವೇಷ: 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಕಚ್ಚಿದ ವಿಷ ಸರ್ಪ; 5 ಮಂದಿ ಸಾವು

24/08/2022, 13:41

ತುಮಕೂರು(reporterkarnataka.com):  ಇದು ವಿಚಿತ್ರವಾದರೂ ಸತ್ಯ. ಕಳೆದ 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಹಾವು ಕಚ್ಚಿದ್ದು,ಇದರಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಇದೆಲ್ಲ ನಡೆದಿರುವುದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೊಗರಿ ಘಟ್ಟ ಗ್ರಾಮದಲ್ಲಿ. ಕುಟುಂಬಸ್ಥರು ಇದೀಗ ತಮ್ಮ ಹೊಲಗದ್ದೆಗೆ ಹೋಗಲು ಭಯ ಪಡುತ್ತಿದ್ದಾರೆ.

ಮೊನ್ನೆ ಮೊನ್ನೆ ಈ ಕುಟುಂಬದ ಗೋವಿಂದ ರಾಜು ಎಂಬುವರು ಹೊಲದಲ್ಲಿ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ಮೃತಪಟ್ಟಿದ್ದರು.

ಹೊಲದಲ್ಲಿ ಮೆಣಸಿನ ಗಿಡ ಬೆಳೆದಿದ್ದರೂ ಅದರ ಸಮೀಪ ಸುಳಿಯದಂತಾಗಿದೆ. ಇನ್ನೊಂದೆಡೆ, ಮಾನಸಿಕವಾಗಿ ಇಡೀ ಕುಟುಂಬವೇ ಜರ್ಜರಿತವಾಗಿದೆ. ಕೂಲಿ ಕಾರ್ಮಿಕರು ಸಹ ಇವರ ಹೊಲಗದ್ದೆಯಲ್ಲಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. 

ನಿರಂತರವಾಗಿ ಹಾವಿನ ಆಕ್ರೋಶ ಒಳಗಾಗುತ್ತಿರುವ ಈ ಕುಟುಂಬ, ರಾಹು ಕೇತು ಪೂಜೆಯನ್ನು ಸಹ ಮಾಡಿದೆ.ಆದರೆ, ಯಾವುದೂ ಕೂಡ ಪ್ರಯೋಜನಕ್ಕೆ ಬಾರದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು