4:44 AM Friday23 - May 2025
ಬ್ರೇಕಿಂಗ್ ನ್ಯೂಸ್
Bangalore | ಗಾರ್ಡನ್ ಸಿಟಿ ವಿಶ್ವವಿದ್ಯಾಲಯ: ಸಾಧಕರಿಗೆ 14ನೇ ಜಿಸಿಯು ಪುರಸ್ಕಾರ Mangaluru | ಮದುವೆ ಸಂಬಂಧದ ಬಗ್ಗೆ ಮನಸ್ತಾಪ ; ಚಿಕ್ಕಪ್ಪನನ್ನೆ ಕೊಂದ ಮುಸ್ತಾಫ Bangalore | ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ… Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ ಮೂಡಿಗೆರೆ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ; ಇಬ್ಬರಿಗೆ ಗಂಭೀರ ಗಾಯ ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ… ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಮಿ ಆನೆಗಳ ಹಸ್ತಾಂತರ: ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… 1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ:…

ಇತ್ತೀಚಿನ ಸುದ್ದಿ

ಹೀಗೊಂದು ಹಾವಿನ ದ್ವೇಷ: 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಕಚ್ಚಿದ ವಿಷ ಸರ್ಪ; 5 ಮಂದಿ ಸಾವು

24/08/2022, 13:41

ತುಮಕೂರು(reporterkarnataka.com):  ಇದು ವಿಚಿತ್ರವಾದರೂ ಸತ್ಯ. ಕಳೆದ 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಹಾವು ಕಚ್ಚಿದ್ದು,ಇದರಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಇದೆಲ್ಲ ನಡೆದಿರುವುದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೊಗರಿ ಘಟ್ಟ ಗ್ರಾಮದಲ್ಲಿ. ಕುಟುಂಬಸ್ಥರು ಇದೀಗ ತಮ್ಮ ಹೊಲಗದ್ದೆಗೆ ಹೋಗಲು ಭಯ ಪಡುತ್ತಿದ್ದಾರೆ.

ಮೊನ್ನೆ ಮೊನ್ನೆ ಈ ಕುಟುಂಬದ ಗೋವಿಂದ ರಾಜು ಎಂಬುವರು ಹೊಲದಲ್ಲಿ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ಮೃತಪಟ್ಟಿದ್ದರು.

ಹೊಲದಲ್ಲಿ ಮೆಣಸಿನ ಗಿಡ ಬೆಳೆದಿದ್ದರೂ ಅದರ ಸಮೀಪ ಸುಳಿಯದಂತಾಗಿದೆ. ಇನ್ನೊಂದೆಡೆ, ಮಾನಸಿಕವಾಗಿ ಇಡೀ ಕುಟುಂಬವೇ ಜರ್ಜರಿತವಾಗಿದೆ. ಕೂಲಿ ಕಾರ್ಮಿಕರು ಸಹ ಇವರ ಹೊಲಗದ್ದೆಯಲ್ಲಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. 

ನಿರಂತರವಾಗಿ ಹಾವಿನ ಆಕ್ರೋಶ ಒಳಗಾಗುತ್ತಿರುವ ಈ ಕುಟುಂಬ, ರಾಹು ಕೇತು ಪೂಜೆಯನ್ನು ಸಹ ಮಾಡಿದೆ.ಆದರೆ, ಯಾವುದೂ ಕೂಡ ಪ್ರಯೋಜನಕ್ಕೆ ಬಾರದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು